ಉತ್ತರ ಕರ್ನಾಟಕ ಅಭಿವೃದ್ಧಿ: ಮರೀಚಿಕೆ
North Karnataka development: A mirage
ಹೂವಿನ ಹಡಗಲಿ 03 : ಉತ್ತರ ಕರ್ನಾಟಕದ ಅಭಿವೃದ್ಧಿಯ ಸ್ಥಿತಿಗತಿಯು ಪ್ರಸ್ತುತ ಮಿಶ್ರ ಪ್ರತಿಕ್ರಿಯೆಗಳಿಂದ ಕೂಡಿದೆ. ಒಂದು ಪ್ರದೇಶ ಮೂಲಸೌಕರ್ಯ ಮತ್ತು ತಾಂತ್ರಿಕ ಬೆಳವಣಿಗೆಯತ್ತ ದಾಪುಗಾಲು ಹಾಕುತ್ತಿದ್ದರೆ, ಮತ್ತೊಂದೆಡೆ ಪ್ರಾದೇಶಿಕ ಅಸಮಾನತೆಯ ಸವಾಲುಗಳು ಹಾಗೆಯೇ ಉಳಿದಿದ್ದು ಉತ್ತರ ಕರ್ನಾಟಕ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಹರಪನಹಳ್ಳಿ ಸರ್ಕಾರಿ ಕಾಲೇಜಿನ ಪ್ರಾಚಾರ್ಯ ಡಾ.ಕೆ.ಸತೀಶ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಇಟ್ಟಗಿ ಹೋಬಳಿ ಘಟಕ ತಾಲೂಕಿನ ಮಹಾಜನದ ಹಳ್ಳಿ ಗ್ರಾಮದ ತಿಗರಿ ಕರಿಯಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪಾಟೀಲ್ ಅನ್ನದಾನ ಗೌಡರ, ಪಾಟೀಲ್ ಚನ್ನನ ಗೌಡರ ಸ್ಮಾರಕದತ್ತಿ, ನಂದಿಹಳ್ಳಿ ಹಾಲಪ್ಪ ದತ್ತಿ, .ಎಸ್. ಮೃತ್ಯುಂಜಯಪ್ಪ ಸ್ಮಾರಕ ದತ್ತಿ, ಮುದ್ದಿ ನಿಂಗಪ್ಪ ಸ್ಮಾರಕ ದತ್ತಿ ಉಪನ್ಯಾಸದಲ್ಲಿ ’ಉತ್ತರ ಕರ್ನಾಟಕ ಅಭಿವೃದ್ಧಿಯ ಸ್ಥಿತಿಗತಿಗಳು’ ವಿಷಯ ಕುರಿತು ಮಾತನಾಡಿದರು.
ಪ್ರಸ್ತುತ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಪ್ರಮುಖ ಸ್ಥಿತಿಗತಿಗಳು ಇಂತಿವೆ:. 1.ಪ್ರಾದೇಶಿಕ ಅಸಮಾನತೆ ,2.ಕೈಗಾರಿಕೆ ಮತ್ತು ತಂತ್ರಜ್ಞಾನ, 3.ನೀರಾವರಿ ಯೋಜನೆಗಳು,4. ಮೂಲಸೌಕರ್ಯ ಮತ್ತು ರೈಲ್ವೆ, ವಿಮಾನ ನಿಲ್ದಾಣದ ಕುರಿತು ಉಪನ್ಯಾಸ ನೀಡಿದರು. ಶಾಲೆಯ ಮುಖ್ಯ ಗುರುಗಳು ಸಿ.ಗುರುಬಸವರಾಜ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಸಾಹಿತ್ಯಿಕ,ಸಾಂಸ್ಕೃತಿಕ ಒಲವನ್ನು ಬೆಳೆಸಿಕೊಳ್ಳಲು ಕರೆ ನೀಡಿದರು. ಸಾಹಿತಿ ಕಾರ್ತಿಕ ಆಚಾರ್ಯ, ಎಂ.ನಿಂಗರಾಜ ದತ್ತಿ ಉಪನ್ಯಾಸ ನೀಡಿದರು. ವಿಜ್ಞಾನ ಶಿಕ್ಷಕ ಎಂ.ಕೊಟ್ರೇಶ್ ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ಕವನ ವಾಚನ, ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಜರುಗಿದವು. ಅಧ್ಯಕ್ಷತೆಯನ್ನು ಇಟ್ಟಗಿ ಹೋಬಳಿ ಘಟಕದ ಅಧ್ಯಕ್ಷ ಜಿ.ಬಿ.ವಿನಯರಾಜ ಆಚಾರ್ಯ ವಹಿಸಿದ್ದರು. ಶಿಕ್ಷಕಿ ಸರ್ವಮಂಗಳ ವಂದಿಸಿದರು. ಶಿಕ್ಷಕ ಗುರುಬಸವರಾಜ ಕಾರ್ಯಕ್ರಮ ನಿರ್ವಹಿಸಿದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 