ಹಂಪಿಯಲ್ಲಿ ಭೂಕಂಪನವಾಗಿಲ್ಲ: ಜಿಲ್ಲಾಧಿಕಾರಿ ನಕುಲ್ ಸ್ಪಷ್ಟನೆ
ಹೊಸಪೇಟೆ, ಜೂ.5,ಜಿಲ್ಲೆಯ ವಿಶ್ವ ಪಾರಂಪರಿಕ ತಾಣವಾದ ಹಂಪಿ ಸುತ್ತಮುತ್ತ ಶುಕ್ರವಾರ ನಸುಕಿನ ಜಾವ ಭೂಕಂಪನವಾಗಿದೆ ಎಂಬುದು ಕೇವಲ ವದಂತಿಯಷ್ಟೇ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.ಹಂಪಿ ಸುತ್ತಮುತ್ತ ಭೂಕಂಪನವಾಗಿದೆ ಎಂಬುದು ಶುದ್ಧ ಸುಳ್ಳು. ಒಂದು ವೇಳೆ ಭೂಕಂಪನವಾಗಿದ್ದರೇ ಅದರ ತೀವ್ರತೆಯ ಪ್ರಮಾಣ ದಾಖಲಾಗುತ್ತಿತ್ತು. ಆದರೆ, ಭೂಗರ್ಭ ಶಾಸ್ತ್ರಜ್ಞರು ಆ ರೀತಿಯ ಯಾವುದೇ ಘಟನೆ ಘಟಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇನ್ನು, ಹಂಪಿಯ ಕೆಲ ಸ್ಥಳೀಯರು ತಮಗೆ ಭೂಕಂಪನದ ಯಾವುದೇ ಅನುಭವವಾಗಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ .ನಸುಕಿನ ಜಾವ ಹಂಪಿ ಸುತ್ತಮುತ್ತ ಲಘು ಭೂಕಂಪನವಾಗಿದೆ ಎಂಬ ಸುದ್ದಿಯೊಂದು ಎಲ್ಲೆಡೆ ಹಬ್ಬಿತ್ತು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 