ಅಂಬಾಭವಾನಿ ದೇವಿಗೆ ಗರಿಗರಿ ನೋಟಿನ ಅಲಂಕಾರ ಕಣ್ತುಂಬಿಕೊಳ್ಳಲು ದೇವಾಲಯಕ್ಕೆ ಆಗಮಿಸುತ್ತಿರುವ ಭಕ್ತರ ಸಾಗರ
Note decoration of Goddess Ambabhavani
ರಾಣೇಬೆನ್ನೂರು 27: ದಸರಾ ಹಬ್ಬದ ಪ್ರಯುಕ್ತ ನಗರದ ದೊಡ್ಡಪೇಟೆ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ದೇವಿಗೆ ಲಕ್ಷಾಂತರ ಮೌಲ್ಯದ ವಿವಿಧ ನೋಟುಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.
ಪ್ರತಿ ವರ್ಷ ಹಬ್ಬದ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿಯೂ ವಿಶೇಷ ರೀತಿಯಲ್ಲಿ ದೇವರಿಗೆ ಅಲಂಕಾರ ಮಾಡಲಾಗುತ್ತದೆ. ಈ ಬಾರಿ 41ನೇ ವರ್ಷದ ದಸರಾ ಮಹೋತ್ಸವ ಅಂಗವಾಗಿ ಸೋಮವಂಶ ಸಹಸ್ರಾರ್ಜುನ ಕ್ಷತ್ರೀಯ ಸಮಾಜದ ಶಕ್ತಿ ಸಂಘಟನೆಯ 20ಯುವಕರು ಮಹಾಲಕ್ಷ್ಮೀ ಅಲಂಕಾರಕ್ಕೆ ಶ್ರಮವಹಿಸಿದ್ದಾರೆ. ಈ ವಿಶೇಷ ಅಲಂಕಾರವನ್ನು ಕಣ್ತುಂಬಿಕೊಳ್ಳಲು ದೇವಾಲಯಕ್ಕೆ ಭಕ್ತರು ಮುಗಿ ಬಿದ್ದಿದ್ದಾರೆ.ಯಾವೆಲ್ಲಾ ನೋಟು ಬಳಕೆ 50ರೂ, 100ರೂ, 200ರೂ ಹಾಗೂ 500ರೂ, ಮುಖಬೆಲೆಯ ನೋಟುಗಳನ್ನು ಬಳಸಲಾಗಿದೆ. ವಿವಿಧ ಬಣ್ಣಗಳನ್ನು ಹೊಂದಿದ ನೋಟುಗಳನ್ನು ಬಳಕೆ ಮಾಡಲಾಗಿದೆ. ದೇವಿಯ ಗರ್ಭಗುಡಿ ದ್ವಾರ ಬಾಗಿಲಿಗೆ, ಮೇಲ್ಛಾವಣೆಯಲ್ಲಿ ಹೂವಿನ ಅಲಂಕಾರ ರೀತಿ ನೋಟಿನ ಹೊದಿಕೆಯನ್ನು ನಿರ್ಮಿಸಲಾಗಿದ್ದು, ದೇವರ ವಿಗ್ರಹ ಹಿಂಭಾಗ, ಮುಂಭಾಗ ಸುತ್ತ ಅಲಂಕಾರ ಮಾಡಲಾಗಿದೆ. ನೋಟುಗಳಲೇ ಹೂಗಳ ಚಿತ್ತಾರ ಅರಳಿಸಲಾಗಿದೆ.
ನವರಾತ್ರಿ ವಿಶೇಷವಾಗಿ ಮಾಡಿದ ಅಲಂಕಾರ ಎಲ್ಲರ ಕಣ್ಮನ ಸೆಳೆಯುತ್ತಿತು.ಈ ಅಲಂಕಾರಕ್ಕಾಗಿ ಲಕ್ಷಾಂತರ ರೂ ಹಣವನ್ನು ಬಳಸಲಾಗಿದೆ. ಈ ವಿಶೇಷ ಅಲಂಕಾರ ಕಣ್ತುಂಬಿಕೊಳ್ಳಲು ಭಕ್ತರು ಅಪಾರ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 