ಡೇಟಾ ಎಂಟ್ರಿ ಆಪರೇಟರ್ ಗಳ ನೇಮಕಕ್ಕೆ ಸೂಚನೆ
ಬೆಂಗಳೂರು, ಮೇ 7,ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಖಾಲಿ ಇರುವಂತ 1121 ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸೂಚಿಸಿದೆ. ರಾಜ್ಯದ ಎಲ್ಲಾ ನಾಡಕಚೇರಿಗಳಿಗೆ ಡೇಟಾ ಎಂಟ್ರಿ ಆಪರೇಟರ್ಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಟೆಂಡರ್ ಕರೆಯಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಜಿಲ್ಲಾ ಮಟ್ಟದಲ್ಲಿ ಟೆಂಡರ್ ಅನ್ನು ಕರೆಯುವ ಪ್ರಾಧಿಕಾರಿಯನ್ನಾಗಿ ಹಾಗೂ ಇ-ಟೆಂಡರ್ ಅಂತಿಮಗೊಳಿಸುವ ಹಾಗೂ ಇನ್ನಿತರೆ ಅನುಮೋದನೆಯನ್ನು ನೀಡಲು, ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿ ಸರ್ಕಾದ ಆದೇಶ ಹೊರಡಿಸಿದೆ.ಈಗಾಗಲೇ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಇ-ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ಜಿಲ್ಲೆಗಳಲ್ಲಿ ಸರ್ಕಾರದ ಆದೇಶದಂತೆ ಸಮಿತಿಯನ್ನು ರಚಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 