ಹಾವೇರಿ: ಎ.28: ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕಾಮರ್ಿಕರ ಸಂಕಷ್ಟಕ್ಕೆ ಸ್ಪಂದಿಸಲು ಸಕರ್ಾರ್ ಘೋಷಿಸಿರುವ ಎರಡು ಸಾವಿರ ರೂ. ನೆರವಿನ ಹಣವನ್ನು ತ್ವರಿತವಾಗಿ ನೊಂದಾಯಿತ ಅರ್ಹ ಎಲ್ಲ ಕಾಮರ್ಿಕರ ಖಾತೆಗೆ ಜಮಾ ಮಾಡಲು ಜಿಲ್ಲಾ ಕಾಮರ್ಿಕ ಅಧಿಕಾರಿಗೆ ಕನರ್ಾಟಕ ಸಕರ್ಾರದ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿದರ್ೆಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಮನೋಜ್ ಜೈನ್ ಅವರು ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳು, ಹಾಗೂ ಲಾಕ್ಡೌನ್ನಿಂದ ತೊಂದರೆಗೊಳಗಾದವರಿಗೆ ಪರಿಹಾರ ಕಾರ್ಯಗಳ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ನೊಂದಾಯಿತ ಅರ್ಹ ಕಾಮರ್ಿಕರಿಗೆ ಎರಡು ಸಾವಿರ ರೂ. ನೆರವಿನ ಹಣ ಸಂಕಷ್ಟ ಕಾಲದಲ್ಲಿ ಜಮಾವಾಗಬೇಕು. ವಿಳಂಬವಾಗಬಾರದು ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಮರ್ಿಕ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿ ಖಾತೆಗೆ ಹಣ ಜಮಾಮಾಡಿಸಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ನೊಂದಾಯಿತ 38 ಸಾವಿರ ಕಾಮರ್ಿಕರ ಪೈಕಿ ನಾಲ್ಕು ಸಾವಿರ ಕಾಮರ್ಿಕರಿಗೆ ಈಗಾಗಲೇ ಹಣ ಜಮೆಯಾಗಿದೆ. ಜಿಲ್ಲಾ ಕಚೇರಿಯಿಂದ ಎಲ್ಲರ ಮಾಹಿತಿಯನ್ನು ಕೇಂದ್ರ ಕಚೇರಿಗೆ ಒದಗಿಸಲಾಗಿದೆ. ಬಾಕಿ 34 ಸಾವಿರ ಫಲಾನುಭವಿಗಳ ಖಾತೆಗೆ ನೆರವಿನ ಹಣ ಜಮೆ ಮಾಡಲು ಖಾತೆದಾರರ ಆಧಾರ್ ಜೋಡಣೆ ಹಾಗೂ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಪರಿಶೀಲನೆ ಕಾರ್ಯ ಪೂರ್ಣಗೊಂಡ ನಂತರ ಕೇಂದ್ರ ಕಚೇರಿಯಿಂದಲೇ ನೇರವಾಗಿ ಕಾಮರ್ಿಕರ ಖಾತೆಗೆ ಹಣ ಜಮೆಯಾಗಲಿದೆ ಎಂದು ಕಾಮರ್ಿಕ ಅಧಿಕಾರಿ ಶ್ರೀಮತಿ ಲಲಿತಾ ಸಾತೇನಹಳ್ಳಿ ಅವರು ಮಾಹಿತಿ ನೀಡಿದರು.
ವಲಸೆ ಕಾಮರ್ಿಕರಿಗೆ, ಅಲೆಮಾರಿಗಳಿಗೆ, ನಿರ್ಗತಿಕರಿಗೆ ಈಗಾಗಲೇ ಆಹಾರ ಕಿಟ್ಗಳನ್ನು ನೀಡಿದ್ದೀರಿ. ಆದರೆ ಬಹಳಷ್ಟು ಕಾಮರ್ಿಕರ ಬೇಡಿಕೆ ಸಲ್ಲಿಸಿ ಅಡುಗೆ ಎಣ್ಣೆ, ಖಾರದಪುಡಿ, ಟೂತ್ಪೇಸ್ಟ್, ಸಾಬೂನು ಬೇಡಿಕೆಗಳನ್ನು ಸಲ್ಲಿಸುತ್ತಿದ್ದಾರೆ. ದುಡಿಮೆ ಇಲ್ಲದ ಈ ಸಂದರ್ಭದಲ್ಲಿ ಆಹಾರ ಪೊಟ್ಟಣದ ಜೊತೆಗೆ ಅಗತ್ಯ ಸಾಮಗ್ರಿಗಳನ್ನು ನೀಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ಈ ಚಟುವಟಿಕೆಗಳಿಗೆ ಬೇಕಾದ ರಸಗೊಬ್ಬರ, ಬಿತ್ತನೆ ಬೀಜ, ಕೃಷಿ ಉಪಕರಣಗಳ ವ್ಯವಸ್ಥೆ, ಕೃಷಿ ಚಟುವಟಿಕೆಗೆ ಅಗತ್ಯವಾದ ಸೇವೆಗಳಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಕಳಪೆ ಬಿತ್ತನೆ ಬೀಜ ದಾಸ್ತಾನು ಮಾಡಿದ ಕೋಲ್ಡ್ ಸ್ಟೋರೇಜ್ ಸೀಜ್ ಮಾಡಲಾಗಿದೆ. ಈ ಬೀಜಗಳನ್ನು ಬೇರೆಡೆ ಸ್ಥಳಾಂತರಿಸಿ ಕೋಲ್ಡ್ ಸ್ಟೋರೆಜ್ಗಳನ್ನು ಖಾಲಿಮಾಡಿಕೊಡಲು ಕೃಷಿ ಜಂಟಿ ನಿದರ್ೆಶಕರಿಗೆ ಸೂಚನೆ ನೀಡಿದರು.
ಲಾಕ್ಡೌನ್ ಅವಧಿಯಲ್ಲಿ ಜನರಿಗೆ ಬೇಕಾದ ದಿನಸಿ, ತರಕಾರಿ ಅಗತ್ಯ ವಸ್ತುಗಳ ಪೂರೈಕೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿದರು. ಕ್ವಾರೆಂಟೈನ್ ಮಾಹಿತಿ, ಮನೆ ಮನೆ ಆರೋಗ್ಯ ತಪಾಸಣೆ, ತುತರ್ು ಹೆಲ್ತ್ಚೆಕಪ್ ಮಾಹಿತಿ, ಜಿಲ್ಲೆಯಿಂದ ಲ್ಯಾಬ್ಗೆ ಕಳುಹಿಸಲಾದ ರಕ್ತ ಮತ್ತು ಗಂಟಲು ದ್ರವ್ಯದ ಮಾದರಿಗಳ ಸಂಗ್ರಹ ಹಾಗೂ ಲ್ಯಾಬ್ಗೆ ಕಳುಹಿಸಲು ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ಪಡೆದುಕೊಂಡರು. ತ್ವರಿತವಾಗಿ ಸ್ಕ್ರೀನಿಂಗ್ ಕಾರ್ಯವನ್ನು ಪೂರ್ಣಗೊಳಿಸಲು ಸಲಹೆ ನೀಡಿದರು.
ಚೆಕ್ಪೋಸ್ಟ್ ಚಟುವಟಿಕೆ ಕುರಿತಂತೆ ಮಾಹಿತಿ ಪಡೆದ ಅವರು, ಪ್ರತಿ ವಾಹನಗಳ ಮೇಲೆ ತೀವ್ರ ನಿಗಾವಹಿಸಬೇಕು. ಎಲ್ಲ ವಾಹನಗಳನ್ನು ತಪಾಸಣೆ ಮಾಡಬೇಕು. ಗಡಿ ಭಾಗದಿಂದ ಸುಲಭವಾಗಿ ಒಳಗೆ ಪ್ರವೇಶಮಾಡಬಾರದು. ಈ ಕುರಿತಂತೆ ಕ್ರಮ ವಹಿಸಲು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಕರೋನಾ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಮಾಹಿತಿ ನೀಡಿದರು. ವಿವಿಧ ರಾಜ್ಯ ಮತ್ತು ವಿದೇಶಗಳಿಂದ 219 ಜನ ಜಿಲ್ಲೆಗೆ ಆಗಮಿಸಿದ್ದು ಈ ಪೈಕಿ 217 ಜನರ ಹೋಂ ಕ್ವಾರೆಂಟೈನ್ ಅವಧಿ ಮುಗಿದಿದೆ. ಎರಡು ಜನ ಮಾತ್ರ ಹೋಂ ಕ್ವಾರಂಟೈನ್ಲ್ಲಿದ್ದಾರೆ. ಜಿಲ್ಲೆಯಲ್ಲಿರುವ ರಾಜ್ಯದ ವಿವಿಧ ಜಿಲ್ಲೆಯ ವಲಸೆ ಕಾಮರ್ಿಕರನ್ನು ಸ್ವ ಗ್ರಾಮಕ್ಕೆ ಕಳುಹಿಸುವ ಕಾರ್ಯ ಪ್ರಗತಿಯಲ್ಲಿ. ಬೇರೆ ಜಿಲ್ಲೆಯಿಂದ ಜಿಲ್ಲೆಗೆ ಆಗಮಿಸಿರುವ ಕಾಮರ್ಿಕರನ್ನು ಅವರವರ ಮನೆಗೆ ಕಳುಹಿಸುವ ಮುನ್ನ ಆರೋಗ್ಯ ತಪಾಸಣೆ ನಡೆಸಿ ವರದಿ ಬರುವ ತನಕ ಸಾಂಸ್ಥಿಕ ಕ್ವಾರೆಂಟೈನ್ ನಡೆಸಲಾಗಿದೆ. ಶೇ. 95 ರಷ್ಟು ಪಡಿತರ ವಿತರಣೆಯಾಗಿದೆ. ವಲಸೆ ಕಾಮರ್ಿಕರು, ಅಲೆಮಾರಿಗಳು, ನಿರ್ಗತಿಕರಿಗೆ ಆಹಾರ ಕಿಟ್ ನೀಡಲಾಗಿದೆ. ದಾನಿಗಳು ಐದು ಸಾವಿರದಷ್ಟು ಕಿಟ್ಗಳನ್ನು ಪೂರೈಸುವುದಾಗಿ ತಿಳಿಸಿದ್ದಾರೆ. ನಾಳೆಯೊಳಗೆ ಎರಡು ಸಾವಿರದಷ್ಟು ಕಿಟ್ ಬರಲಿವೆ. ಮಠಗಳು, ಸ್ವಯಂ ಸೇವಾ ಸಂಸ್ಥೆಗಳು, ತಹಶೀಲ್ದಾರಗಳ ಮೂಲಕವೇ ಆಹಾರ ಕಿಟ್ ವಿತರಣೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಉಪ ವಿಭಾಗಾಧಿಕಾರಿಗಳಾದ ಡಾ.ದಿಲೀಷ್ ಶಶಿ, ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗರಾಜ ನಾಯಕ್, ಕೃಷಿ ಇಲಾಖೆ ಜಂಟಿ ನಿದರ್ೆಶಕ ಮಂಜುನಾಥ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿದರ್ೆಶಕ ವಿನೋದಕುಮಾರ ಹೆಗ್ಗಳಗಿ ಇತರರು ಉಪಸ್ಥಿತರಿದ್ದರು.