ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಪಿಟಿಸಿಎಲ್ಗೆ ಸೂಚನೆ
ಲೋಕದರ್ಶನ ವರದಿ
ಬೈಲಹೊಂಗಲ, 26- ಪಟ್ಟಣದ ಶಾಸಕ ಮಹಾಂತೇಶ ಕೌಜಲಗಿ ನಿವಾಸಕ್ಕೆ ತಾಲ್ಲೂಕಿನ ವಕ್ಕುಂದ ಗ್ರಾಮದ ರೈತರು ತಮಗಾಗುತ್ತಿರುವ ವಿದ್ಯುತ್ ತೊಂದರೆ ನಿವಾರಿಸಿ ಎಂದು ಮನವಿ ಮಾಡಲು ಬಂದರೆ ಶಾಸಕರು ಅವರಿಗೆ ಸರಿಯಾಗಿ ಸ್ಪಂದಿಸದೆ ಸಭೆಯಿಂದ ಎದ್ದು ಹೊರ ನಡೆದರು.
ರೈತರು ನಾವು ಯಾರಿಗೂ ಲಂಚ ಕೊಟ್ಟಿಲ್ಲ. ಕೊಡುವುದಿಲ್ಲ. ಕೆಪಿಟಿಸಿಎಲ್ ಅಧಿಕಾರಿಗಳಿಗೆ ಲಂಚ ಕೊಟ್ಟರೆ ಮಾತ್ರ ಸಮಪರ್ಕವಾಗಿ ವಿದ್ಯುತ್ ಕೊಡಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ರೈತರಿಗೆ ತೀವ್ರ ತೊಂದರೆ ಆಗಲಿದೆ. ಶಾಸಕರು ನೀವು ರೈತರನ್ನು ಸುಕ್ಕಾಸುಮ್ನೇ ಸತಾಯಿಸುತ್ತಿರುವ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಸೂಚಿಸಿ ಸರಿಯಾಗಿ ವಿದ್ಯುತ್ ಕೊಡಿಸಿಕೊಡಿ
ಎಂದರು.
ರೈತರು ಸುದ್ದಿಗಾರರೊಂದಿಗೆ ಮಾತನಾಡಿ, 'ಗ್ರಾಮದ ರೈತರ ಮೇಲೆ ಕೆಪಿಟಿಸಿಎಲ್ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯ ವಿರುದ್ಧ ಪ್ರತಿಭಟಿಸಿ ಶಾಸಕರನ್ನು, ಅಧಿಕಾರಿ ವಲಯವನ್ನು ಗ್ರಾಮಕ್ಕೆ ಕರೆಯಿಸಬೇಕಿತ್ತು. ನಾವು ಆ ರೀತಿ ಮಾಡಲಿಲ್ಲ. ಸ್ಥಳೀಯ ಶಾಸಕರು ನಮ್ಮ ಮನವಿಗೆ ಸ್ಪಂದಿಸಿ ವಿದ್ಯುತ್ ಕೊಡಿಸಿಕೊಡುತ್ತಾರೆಂದು ನಂಬಿದ್ದೇವು. ಆದರೆ ಮನೆಗೆ ಬಂದ ರೈತರಿಗೆ ಶಾಸಕರು ನಮಗೆ ಅಪಮಾನ ಮಾಡಿದರು. ಚುನಾವಣೆ ಸಂದರ್ಭದಲ್ಲಿ ಸಭ್ಯರಂತೆ ವತರ್ಿಸಿ ಮತ ಕೇಳಿ ಶಾಸಕರಾಗಿದ್ದಾರೆ. ಈಗ ರೈತರನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ. ಇದು ಅಧಿಕಾರದ ದುರನಡೆತೆಯಾಗಿದೆ. ಶಾಸಕರು, ಅಧಿಕಾರಿಗಳು ಒಂದಾಗಿ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆಂದು ಕಟುವಾಗಿ
ಟೀಕಿಸಿದರು.
ಅಧಿಕಾರಿಗಳೊಂದಿಗೆ ಚಚರ್ೆ: ರೈತರನ್ನು ಹೊರ ನಡೆಯಿರಿ ಎಂದ ಶಾಸಕರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ರೈತರು ಕೂಡಲೇ ಅಧಿಕಾರಿಗಳನ್ನು ಕರೆದು ವಿದ್ಯುತ್ ಸಮಸ್ಯೆ ನಿವಾರಿಸಬೇಕು ಎಂದು ಪಟ್ಟು ಹಿಡಿದರು. ರೈತರ ಒತ್ತಡಕ್ಕೆ ಮನಿದ ಶಾಸಕರು ತಮ್ಮ ಮನೆಗೆ ಕೆಪಿಟಿಸಿಎಲ್ ಎಇಇ, ಅಧಿಕಾರಿಗಳನ್ನು ಕರೆದು ಕೆಲಕಾಲ ಚಚರ್ೆ ನಡೆಸಿದರು. ಗ್ರಾಮದ ರೈತರಿಗೆ, ನೇಕಾರರಿಗೆ, ಬೈಲಹೊಂಗಲ ಪಟ್ಟಣ ಜನರ ಕುಡಿಯುವ ನೀರು ಸರಬರಾಜಿಗೆ ಯಾವುದೇ ರೀತಿ ತೊಂದರೆ ಆಗದ ರೀತಿಯಲ್ಲಿ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ರಾಮನಗೌಡ ಪಾಟೀಲ, ಕಾಶಪ್ಪ ಭದ್ರಶೆಟ್ಟಿ, ಅಶೋಕ ಭದ್ರಶೆಟ್ಟಿ, ಎಂ.ಎಫ್.ತಡಸಲ, ಯು,ಬಿ.ಅಂಗಡಿ, ಆನಂದ ಪಂತಿ, ಎ.ಎಸ್.ಹೊರಳಿ, ಮಂಜುನಾಥ ಉರಬಿನ್, ಮಲ್ಲಿಕಾಜರ್ುನ ಅಂಬರಗಟ್ಟಿ, ವಿನಾಯಕ ಸುತಗಟ್ಟಿ, ಚನ್ನಪ್ಪ ಬಡಿಗೇರ, ಮುಂತಾದವರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 