ಸರ್ಕಾರಿ, ಹೊರಗುತ್ತಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಬೆಂಗಳೂರು,
ಮಾ. 31,ಲಾಕ್ ಡೌನ್ ಸಮಯದಲ್ಲಿ ಮಹಾಮಾರಿ ಕೊರೋನಾ ಹರಡವುದನ್ನು ನಿಯಂತ್ರಿಸಲು
ಮುಂದಾಗಿರುವ ರಾಜ್ಯ ಸರ್ಕಾರ ಅಗತ್ಯ ಸೇವೆ ಒದಗಿಸುತ್ತಿರುವ ಇಲಾಖೆಗಳ ಸರ್ಕಾರಿ ಮತ್ತು
ಹೊರಗುತ್ತಿಗೆ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದೆ.ಸಿಬ್ಬಂದಿ
ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಮುನೀಶ್ ಮೌದ್ಗೀಲ್ ಆದೇಶ ಹೊರಡಿಸಿದ್ದು,
ಕರ್ತವ್ಯಕ್ಕೆ ಹಾಜರಾಗಲು ಸರ್ಕಾರಿ ಮತ್ತು ಹೊರಗುತ್ತಿಗೆ ನೌಕರರಿಗೆ ಸೂಚಿಸಿದ್ದಾರೆ.ಆಯಾ
ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಮ್ಮ ಇಲಾಖೆಯಿಂದ ನೀಡಿರುವ
ಗುರುತಿನ ಚೀಟಿಯನ್ನು ತಪಾಸಣೆ ವೇಳೆ ಪೊಲೀಸರಿಗೆ ಹಾಜರುಪಡಿಸಿದರೆ ಚೆಕ್ ಪೋಸ್ಟ್ ನಲ್ಲಿ
ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.ಸರ್ಕಾರಿ ನೌಕರರು
ಪ್ರಯಾಣಿಸುವ ಸರ್ಕಾರಿ ಅಥವಾ ಹೊರಗುತ್ತಿಗೆ ವಾಹನಗಳಿಗೆ ಪ್ರತ್ಯೇಕ ಪಾಸ್ ಅವಶ್ಯಕತೆ
ಇರುವುದಿಲ್ಲ. ಆದರೆ ಹೊರಗುತ್ತಿಗೆ ನೌಕರರಿಗೆ ವಾರ್ ರೂಮ್ ನಿಂದ ಗುರುತಿನ ಚೀಟಿ
ನೀಡಲಾಗುತ್ತಿದ್ದು ಅಗತ್ಯ ಮಾಹಿತಿಯನ್ನು ಇಂದು ಸಂಜೆಯೊಳಗೆ ಇಮೇಲ್ ಮೂಲಕ ತಲುಪಿಸಲು
ಸೂಚಿಸಿದ್ದಾರೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 