ಮಸೀದಿ ಸಿಬ್ಬಂದಿಗಳ ಹುದ್ದೆ ಮುಂದುವರಿಸಲು ಸೂಚನೆ
ಮಂಗಳೂರು, ಮೇ 13, ಮಸೀದಿಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪೇಶ್ ಇಮಾಮ್, ಮೌಝನ್ ಹಾಗೂ ಮದರಸದ ಸಿಬ್ಬಂದಿಗಳನ್ನು ಕೊರೋನಾ ರೋಗ ಹಿನ್ನೆಲೆಯಲ್ಲಿ ಒಂದು ವರ್ಷದ ಮಟ್ಟಿಗೆ ಅಥವಾ ಲಾಕ್ಡೌನ್ ಮಗಿಯುವ ತನಕ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನೇ ಮುಂದುವರಿಸಲು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಕನಚೂರು ಸೂಚಿಸಿದ್ದಾರೆ.
ಸರಕಾರದ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಆದೇಶದಂತೆ ಕೊರೋನಾ ವೈರಸ್ಯನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ಮಸೀದಿ, ದರ್ಗಾ ಹಾಗೂ ಮದರಸಗಳನ್ನು ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಸೇವೆ ಸಲ್ಲಿಸುತ್ತಿರುವ ಪೇಶ್ ಇಮಾಮ್, ಮೌಝನ್ ಹಾಗೂ ಮದರಸದ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಇರಬೇಕಾದ ಪರಿಸ್ಥಿತಿ ಬಂದಿದೆ. ಮಾರ್ಚ್ ತಿಂಗಳಿನಿಂದ ಆರಂಭವಾದ ಲಾಕ್ಡೌನ್ ಇನ್ನೂ ಮುಂದುವರೆಯುತ್ತಿದೆ. ಈ ಸಂದರ್ಭದಲ್ಲಿ ಸರಕಾರದ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಆದೇಶವನ್ನು ಪಾಲನೆ ಮಾಡುವ ಅನಿವಾರ್ಯತೆಯಿಂದ ತಮ್ಮ ಕರ್ತವ್ಯಕ್ಕೆ ಹಾಜರಾಗಲಿಲ್ಲ, ಆದರೂ ಅವರ ವೇತನವನ್ನು ಸಂಬಂಧಪಟ್ಟ ಮಸೀದಿ, ಮದರಸ ಹಾಗೂ ದರ್ಗಾ ಆಡಳಿತ ಸಮಿತಿಗಳು ಪಾವತಿಸಿರುತ್ತಾರೆ. ವರ್ಷಂಪ್ರತಿ ರಂಜಾನ್ ತಿಂಗಳಿನಲ್ಲಿ ಸಿಬ್ಬಂದಿಗಳನ್ನು ಕೈಬಿಡುವುದು, ಹಾಗೂ ಹೊಸ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು ವಾಡಿಕೆಯಾಗಿದೆ. ಕೊರೋನಾ ರೋಗ ಇರುವ ಕಾರಣ ಈ ವಾಡಿಕೆಯನ್ನು ಬದಿಗಿಟ್ಟು ಒಂದು ವರ್ಷದ ಮಟ್ಟಿಗೆ ಅಥವಾ ಲಾಕ್ಡೌನ್ ಮಗಿಯುವ ತನಕ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನೇ ಮುಂದುವರಿಸಲು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ. ಮೋನು ಕನಚೂರು ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 