ಆಯೋಧ್ಯೆಗೆ ನಾಳೆ ನೃಪೇಂದ್ರ ಮಿಶ್ರಾ ಭೇಟಿ
ಆಯೋಧ್ಯ, ಫೆ ೨೮ : ಭವ್ಯ ರಾಮ ದೇಗುಲ ನಿರ್ಮಾಣ ಕಾರ್ಯಗಳು ಪೂರ್ಣಗೊಳ್ಳುವವರೆಗೆ ರಾಮಲಲ್ಲಾ ವಿಗ್ರಹವನ್ನು ಪರ್ಯಾಯ ಜಾಗಕ್ಕೆ ಸ್ಥಳಾಂತರಿಸುವ ಸಂಬಂಧ ನಿರ್ಧಾರ ಕೈಗೊಳ್ಳಲು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಶನಿವಾರ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ.
ಆಯೋಧ್ಯೆಗೆ ಆಗಮಿಸುವ ಮುನ್ನ ಅವರು ಲಕ್ನೋದಲ್ಲಿ ಶುಕ್ರವಾರ ಸಂಜೆ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರನ್ನು ಭೇಟಿ ಮಾತುಕತೆ ನಡೆಸಲಿದ್ದಾರೆ.
ದೇಗುಲ ನಿರ್ಮಾಣ ಸಮಿತಿ ಅಧ್ಯಕ್ಷರು ಮೊದಲು ರಾಮಲಲ್ಲಾ ದೇಗುಲಕ್ಕೆ ಪೂಜೆ ಸಲ್ಲಿಸಿ ನಂತರ ದೇಗುಲ ನಿರ್ಮಾಣಗೊಳ್ಳಲಿರುವ ಪ್ರದೇಶವನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಗುಲ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವವರೆಗೆ ವಿಗ್ರಹವನ್ನು ಸ್ಥಳಾಂತರಗೊಳಿಸಲು ಪರ್ಯಾಯ ಸ್ಥಳ ಕುರಿತು ಚರ್ಚಿಸಲು ನೃಪೇಂದ್ರ ಮಿಶ್ರಾ, ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯರೊಂದಿಗೆ ಸಭೆ ನಡೆಸುವ ನಿರೀಕ್ಷೆಯಿದೆ.
ಈ ನಡುವೆ ರಾಮಜನ್ಮ ಭೂಮಿ ಪ್ರದೇಶದಲ್ಲಿ ಆರಂಭಿಸಲಾಗಿರುವ ಸ್ವಚ್ಚತಾ ಅಭಿಯಾನದ ಉಸ್ತುವಾರಿಯನ್ನು ಸರ್ಕಾರಿ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ.
ಮತ್ತೊಂದು ಕಡೆ, ಹಲವಾರು ಕಾರಣಗಳಿಂದಾಗಿ ಜಿಲ್ಲಾಡಳಿತ ಇಡೀ ಜಿಲ್ಲಾದ್ಯಂತ ಸೆಕ್ಷನ್ ೧೪೪ರಡಿ ನಿಷೇಧಾಜ್ಞೆಯನ್ನು ವಿಸ್ತರಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 