ಅನಿಧರ್ಿಷ್ಠಾವಧಿವರೆಗೆ ಮುಂದೂಡಿದ ಓಬಳಾಪೂರ ಗ್ರಾಮ ಸಭೆ
ಲೋಕದರ್ಶನ ವರದಿ
ರಾಮದುರ್ಗ , 7: ಜೂನ್ ತಿಂಗಳಲ್ಲಿ ನಡೆದ ಪ್ರಥಮ ಹಂತದ ಗ್ರಾಮ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಓದಿ ಹೇಳಿದ ನಂತರ ಮುಂದೆ ಸಭೆ ನಡೆಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದ ಕಾರಣ ಗ್ರಾಮ ಸಭೆಯನ್ನೇ ಮುಂದೂಡಿದ ಘಟನೆ ತಾಲೂಕಿನ ಓಬಳಾಪೂರದಲ್ಲಿ ಇತ್ತಿಚೆಗೆ
ನಡೆದಿದೆ.
ಓಬಳಾಪೂರ ಗ್ರಾ.ಪಂ ಅಧ್ಯಕ್ಷ ಶಂಕರ ಲಮಾಣಿ ಅಧ್ಯಕ್ಷತೆಯಲ್ಲಿ 2018-19ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಆಯೋಜಿಸಲಾಗಿತ್ತು. ಗ್ರಾಮಸಭೆ ಆರಂಭವಾಗುತ್ತಿದ್ದಂತೆ ಪಿಡಿಓ ಶೇಖರ ಹಿರೇಸೋಮನ್ನವರ ಸ್ವಾಗತಿಸಿ ಸಭೆಗೆ ಆಗಮಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಮ್ಮ ಇಲಾಖೆಯ ಯೋಜನೆಗಳನ್ನು ಗ್ರಾಮಸ್ಥರಿಗೆ ತಿಳಿಸುವಂತೆ ತಿಳಿಸಿದರು.
ಗ್ರಾಮಸ್ಥರ ಒತ್ತಾಯದ ಮೇರೆಗೆ ಹಿಂದಿನ ಸಭೆಯ ನಿರ್ಣಯಗಳನ್ನು ಓದುತ್ತಿದ್ದಂತೆ ಪ್ರಗತಿ ಮಾತ್ರ ಶೂನ್ಯವಾಗಿದೆ ಎಂಬ ಹಿನ್ನಲೆಯಲ್ಲಿ ಗ್ರಾ.ಪಂ ಅಧ್ಯಕ್ಷ ಶಂಕರ ಲಮಾಣಿ ಅಧಿಕಾರಿಗಳ ತಪ್ಪಿನಿಂದಾಗಿ ಹಿಂದಿನ ಸಭೆಯ ನಿರ್ಣಯಗಳನ್ನು ಬರೆದು ನಂತರ ಮತ್ತೊಂದು ದಿನಾಂಕ ನಿಗಧಿ ಮಾಡಿ ಸಭೆ ನಡೆಸಲಾಗುವುದು ಈ ಗ್ರಾಮಸಭೆಯನ್ನು ಅನಿಧರ್ಿಷ್ಠಾವಧಿಗೆ ಮೂಂದೂಡಲಾಗಿದೆ ಎಂದು ಘೋಷಣೆ ಮಾಡಿದರು.
ಸಭೆಯಲ್ಲಿ ಕೃಷಿ ಮತ್ತು ಅಬಕಾರಿ ಇಲಾಖೆಗಳ ಸಹಾಯಕರನ್ನು ಹೊರತುಪಡಿಸಿ ಯಾವದೇ ಅಧಿಕಾರಿಗಳು ಸಭೆಗೆ ಆಗಮಿಸಿರಲಿಲ್ಲ. ಸಭೆಯಲ್ಲಿ ಪಂಚಾಯ್ತಿ ಉಪಾಧ್ಯಕ್ಷೆ ಶಾಂತವ್ವ ಪಾಟೀಲ ಮತ್ತು ಸದಸ್ಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 