ಅನಿಧರ್ಿಷ್ಠಾವಧಿವರೆಗೆ ಮುಂದೂಡಿದ ಓಬಳಾಪೂರ ಗ್ರಾಮ ಸಭೆ
ಲೋಕದರ್ಶನ ವರದಿ
ರಾಮದುರ್ಗ , 7: ಜೂನ್ ತಿಂಗಳಲ್ಲಿ ನಡೆದ ಪ್ರಥಮ ಹಂತದ ಗ್ರಾಮ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಓದಿ ಹೇಳಿದ ನಂತರ ಮುಂದೆ ಸಭೆ ನಡೆಸಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದ ಕಾರಣ ಗ್ರಾಮ ಸಭೆಯನ್ನೇ ಮುಂದೂಡಿದ ಘಟನೆ ತಾಲೂಕಿನ ಓಬಳಾಪೂರದಲ್ಲಿ ಇತ್ತಿಚೆಗೆ
ನಡೆದಿದೆ.
ಓಬಳಾಪೂರ ಗ್ರಾ.ಪಂ ಅಧ್ಯಕ್ಷ ಶಂಕರ ಲಮಾಣಿ ಅಧ್ಯಕ್ಷತೆಯಲ್ಲಿ 2018-19ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಆಯೋಜಿಸಲಾಗಿತ್ತು. ಗ್ರಾಮಸಭೆ ಆರಂಭವಾಗುತ್ತಿದ್ದಂತೆ ಪಿಡಿಓ ಶೇಖರ ಹಿರೇಸೋಮನ್ನವರ ಸ್ವಾಗತಿಸಿ ಸಭೆಗೆ ಆಗಮಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಮ್ಮ ಇಲಾಖೆಯ ಯೋಜನೆಗಳನ್ನು ಗ್ರಾಮಸ್ಥರಿಗೆ ತಿಳಿಸುವಂತೆ ತಿಳಿಸಿದರು.
ಗ್ರಾಮಸ್ಥರ ಒತ್ತಾಯದ ಮೇರೆಗೆ ಹಿಂದಿನ ಸಭೆಯ ನಿರ್ಣಯಗಳನ್ನು ಓದುತ್ತಿದ್ದಂತೆ ಪ್ರಗತಿ ಮಾತ್ರ ಶೂನ್ಯವಾಗಿದೆ ಎಂಬ ಹಿನ್ನಲೆಯಲ್ಲಿ ಗ್ರಾ.ಪಂ ಅಧ್ಯಕ್ಷ ಶಂಕರ ಲಮಾಣಿ ಅಧಿಕಾರಿಗಳ ತಪ್ಪಿನಿಂದಾಗಿ ಹಿಂದಿನ ಸಭೆಯ ನಿರ್ಣಯಗಳನ್ನು ಬರೆದು ನಂತರ ಮತ್ತೊಂದು ದಿನಾಂಕ ನಿಗಧಿ ಮಾಡಿ ಸಭೆ ನಡೆಸಲಾಗುವುದು ಈ ಗ್ರಾಮಸಭೆಯನ್ನು ಅನಿಧರ್ಿಷ್ಠಾವಧಿಗೆ ಮೂಂದೂಡಲಾಗಿದೆ ಎಂದು ಘೋಷಣೆ ಮಾಡಿದರು.
ಸಭೆಯಲ್ಲಿ ಕೃಷಿ ಮತ್ತು ಅಬಕಾರಿ ಇಲಾಖೆಗಳ ಸಹಾಯಕರನ್ನು ಹೊರತುಪಡಿಸಿ ಯಾವದೇ ಅಧಿಕಾರಿಗಳು ಸಭೆಗೆ ಆಗಮಿಸಿರಲಿಲ್ಲ. ಸಭೆಯಲ್ಲಿ ಪಂಚಾಯ್ತಿ ಉಪಾಧ್ಯಕ್ಷೆ ಶಾಂತವ್ವ ಪಾಟೀಲ ಮತ್ತು ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 