ರೋಟರಿ ಗದಗ ಸೆಂಟ್ರಲ್ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ
Oath-taking ceremony for Rotary Gadag Central office bearers
ಗದಗ 17: ರೋಟರಿ ಗದಗ ಸೆಂಟ್ರಲ್ ವತಿಯಿಂದ 2025-26 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವು ಸೇವಾಲಾಲ ನಗರದ ರೋಟರಿ ಭವನದಲ್ಲಿ ಜರುಗಿತು.
ಸಾನಿಧ್ಯವನ್ನು ಪರಮಪೂಜ್ಯ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ವಹಿಸಿದ್ದರು. ಡಿಆರ್ ಎಫ್ ಸಿ ಪಿಡಿಜಿ ರೋ.ಗಣೇಶ ಭಟ್ ಅವರ ಅಮೃತ ಹಸ್ತದಿಂದ ನೂತನ ಪದಾಧಿಕಾರಿಗಳಿಗೆ ಸೇವಾದೀಕ್ಷೆಯನ್ನು ನೆರವೇರಿಸಿ ರೋಟರಿ ಗದಗ ಸೆಂಟ್ರಲ್ ಪ್ರಸಕ್ತ ಸಾಲಿನಲ್ಲಿ ಶಿಕ್ಷಣ, ಆರೋಗ್ಯ , ಸದಭಿರುಚಿಯ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಿ ಎಂದರು. ಉಪಸ್ಥಿತರಿದ್ದ ಅಸಿಸ್ಟಂಟ್ ಗೌರ್ನರ್ ರೋ.ವಿ.ಕೆ.ಗುರುಮಠ ತಾವು ಕ್ಲಬ್ ಬೆಳವಣಿಗೆಗೆ ಎಲ್ಲ ರೀತಿಯ ಸಹಕಾರ ನೀಡುವದಾಗಿ ಹೇಳಿದರು. ಅಧ್ಯಕ್ಷರಾಗಿ ರೋ.ಚೇತನ ಅಂಗಡಿ, ಕಾರ್ಯದರ್ಶಿ ರೋ.ರಾಜು ಉಮನಾಬಾದಿ, ಖಜಾಂಚಿ ರೋ.ಡಾ.ಪ್ರಭು ಗಂಜಿಹಾಳ, ಉಪಾಧ್ಯಕ್ಷರಾಗಿ ರೋ.ಟಿ ಎಸ್ ಪಾಟೀಲ, ಐಪಿಪಿ ರೋ.ಆರ್ ಬಿ ದಾನಪ್ಪಗೌಡರ ,ಪ್ರೆಸಿಡೆಂಟ್ ಎಲೆಟ್ ರೋ.ಮಧುಸೂಧನ ಪುಣೇಕರ, ಸಾರ್ಜಂಟ್ ಅಟ್ ಆರ್ಮ್ಸ ರೋ. ಈಶಣ್ಣ ಗದ್ದಿಕೇರಿ, ನಿರ್ದೇಶಕ ಮಂಡಳಿಯಲ್ಲಿ -ಕ್ಲಬ್ ಸೇವೆ ರೋ.ಪ್ರಕಾಶ ಉಗಲಾಟದ, ವೃತ್ತಿಪರ ಸೇವೆ ರೋ.ಮಂಜುನಾಥ ಬೇಲೇರಿ, ಸಮುದಾಯ ಸೇವೆ ರೋ. ಮುರುಗೇಶ ಬಡ್ನಿ, ಅಂತಾರಾಷ್ಟ್ರೀಯ ಸೇವೆ ರೋ.ಮಲ್ಲಿಕಾರ್ಜುನ ಐಲಿ, ಯುವಸೇವೆ ರೋ.ರಾಜು ಕಂಟಿಗೊಣ್ಣನವರ, ಸ್ಥಾಯಿ ಸಮಿತಿಯಲ್ಲಿ- ಆಡಳಿತ ರೋ.ಡಾ.ಸಿ.ಬಿ.ಹಿರೇಗೌಡ್ರ, ಸೇವಾಯೋಜನೆ ರೋ.ಎಸ್.ಆಯ್ ಅಣ್ಣಿಗೇರಿ, ಸದಸ್ಯತ್ವ ರೋ.ಎಸ್.ಸಿ.ಲಕ್ಕುಂಡಿ, ಪಿಆರ್ ಓ ಮತ್ತು ಬುಲೆಟಿನ್ ರೋ.ಹೆಚ್ ವಿ ಶೆಟ್ಟಿ, ಕ್ಲಬ್ ತರಬೇತುದಾರರು ರೋ.ಡಾ.ವಿ.ಸಿ.ಶಿರೋಳ, ರೋಟರಿ ಫೌಂಡೇಶನ್ ರೋ.ಶರಣಬಸಪ್ಪ ಗುಡಿಮನಿ, ಪೋಲಿಯೊ ಪಲ್ಸ್ ರೋ.ಸಂತೋಷ ತೋಟಗಂಟಿಮಠ, ಆರ್ ಸಿ ಸಿ/ಐಸಿಸಿ ರೋ.ಸಿ.ಜಿ.ಹಿರೇಗೌಡ್ರ, ಕ್ಲಬ್ ಇತಿಹಾಸಕಾರ ರೋ.ಮಲ್ಲಿಕಾರ್ಜುನ ಚಂದಪ್ಪನವರ, ಸೋಶಿಯಲ್ ಮತ್ತು ಕಲ್ಚರಲ್ ರೋ.ವಿಜಯಕುಮಾರ ಹಿರೇಮಠ , ಸ್ಪೋರ್ಟ್ಸ ಕಮೀಟಿ ರೋ. ರಾಜು ಕುರುಡಗಿ ಪದಗ್ರಹಣ ಮಾಡಿದರು. ಸಾನಿಧ್ಯ ವಹಿಸಿದ್ದ ಡಾ. ತೋಟದ ಸಿದ್ದರಾಮ ಮಹಾಸ್ವಾಮಿಗಳು ರೋಟರಿ ಗದಗ ಸೆಂಟ್ರಲ್ ಉತ್ತಮವಾದ ಕಾರ್ಯಗಳನ್ನು ಮಾಡುವ ಮೂಲಕ ಹೆಸರಾಗಿದೆ. ಸೇವೆಗೆ ಇನ್ನೊಂದು ಹೆಸರೆ ರೋಟರಿ ಸಂಸ್ಥೆ ಆಗಿದೆ ಎಂದು ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಸಿ.ಎಫ್ ಪಾಟೀಲ, ಸಿ.ಜಿ.ಚನ್ನಪ್ಪಗೌಡರ, ಮಹಿಳಾ ಸದಸ್ಯರಾಗಿ ವಂದನಾ ಚೇ. ಅಂಗಡಿ, ಜ್ಯೋತಿ ವಿ ಹಿರೇಮಠ, ಶ್ರೀಮತಿ ವಿದ್ಯಾ ಪ್ರ ಗಂಜಿಹಾಳ, ಸುಜಾತ ಶ ಗುಡಿಮನಿ, ಜ್ಯೋತಿ ರಾ. ಉಮನಾಬಾದಿ, ಮಂಗಳಾ ಮ. ಬೇಲೇರಿ ನೂತನವಾಗಿ ಕ್ಲಬ್ ಸದಸ್ಯರಾಗಿ ಸೇರ್ಪಡೆಗೊಂಡರು.
ರೋ.ಇಂಜನೀಯರ ಮೋಹನ ಹುಲಕೋಟಿ , ರೋ.ಶಶಿಧರ ದಿಂಡೂರ ,ರೋ.ರಾಜಣ್ಣ ಮುಧೋಳ, ರೋ. ಪರಶುರಾಮ ನಾಯ್ಕರ್, ರೋ.ಸುರೇಶ ಅಬ್ಬಿಗೇರಿ ರೋ. ಮಂಜುನಾಥ ಕಬಾಡಿ , ರೋ.ಡಿ.ಜಿ.ಕೊಳ್ಳಿ, ರೋ.ಕೆ.ವಿ.ಪಾಟೀಲ, ರೋ.ಸುರೇಶ ನಿಡಗುಂದಿ ಮೊದಲಾದವರು ಪಾಲ್ಗೊಂಡಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 