ಸಂಚಾರಕ್ಕೆ ಅಡೆತಡೆ : ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ
Obstruction to traffic: Evacuation operation of street vendors
ಸಂಕೇಶ್ವರ 23: ಪಟ್ಟಣದ ಮಾರುಕಟ್ಟೆಯ ಪ್ರಮುಖ ರಸ್ತೆಗಳಲ್ಲಿ ಕುಳಿತು ರಸ್ತೆ ಸಂಚಾರಕ್ಕೆ ಅಡೆತಡೆ ಮಾಡುತ್ತಿದ್ದ ಬೀದಿ ಬದಿಯ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಸೋಮವಾರ ಮಧ್ಯಾಹ್ನದಿಂದ ನಡೆಯಿತು. ಸೋಮವಾರ ಮಧ್ಯಾಹ್ನ ಪುರಸಭೆ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ತೆರವು ಕಾರ್ಯಾಚರಣೆ ಮಾಡುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಹಲವಾರು ತಿಂಗಳುಗಳಿಂದ ಪಟ್ಟಣದ ಮಾರುಕಟ್ಟೆಯ ಪ್ರಮುಖ ರಸ್ತೆಗಳಲ್ಲಿ ಬೀದಿಬದಿ ವ್ಯಾಪಾರಿಗಳು ತಳ್ಳುವ ಗಾಡಿಗಳನ್ನು ಹಾಗೂ ರಸ್ತೆ ಬದಿಯಲ್ಲಿ ಕುಳಿತುಕೊಳ್ಳುವ ಮೂಲಕ ರಸ್ತೆ ಸಂಚಾರಕ್ಕೆ ಅಡತಡೆ ಯನ್ನು ಮಾಡುತ್ತಿದ್ದರು. ಬೀದಿ ಬದಿಯ ವ್ಯಾಪಾರಿಗಳ ಈ ಕ್ರಮಕ್ಕೆ ವಾಹನ ಸವಾರರು ಹಾಗೂ ಪಾದಚಾರಿ ಗಳು ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿತ್ತು. ಇದರಿಂದ ಈ ರಸ್ತೆಗಳಲ್ಲಿ ಸಾಗುವದು ತುಂಬಾ ಕಷ್ಟಕರವಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆ ಗಳು ನಡೆದಿದ್ದವು. ಬಳಿಕ ಸೋಮವಾರ ಪುರಸಭೆ ಕೆಲವು ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 