ಸಾಗರ ಕವಚ ಅಣುಕು ಕಾರ್ಯಾಚರಣೆ

ಕಾರವಾರ 14:  ಕರಾವಳಿ ಭಾಗದಲ್ಲಿ ರಕ್ಷಣೆ ಮತ್ತು ಭದ್ರತೆ ಕುರಿತು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮಕೈಗೊಳ್ಳುವ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 16 ಮತ್ತು 17 ರಂದು ರಕ್ಷಣಾ ವ್ಯವಸ್ಥೆಯ ಅಣಕು ಪ್ರದರ್ಶನ 'ಸಾಗರ ಕವಚ' ವನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಭಾರತೀಯ ನೌಕಾಪಡೆ, ಕೋಸ್ಟ್‌ ಗಾರ್ಡ್‌ ಮತ್ತು ರಾಜ್ಯದ ಕರಾವಳಿ ಕಾವಲು ಪಡೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗುತ್ತಿದೆ. 

 ಈ ಕಾರ್ಯಾಚರಣೆಗೆ ಸಂಬಂಧಪಟ್ಟಂತೆ ಸಂಬಂಧಿಸಿದ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಇಲಾಖೆಗಳು ಭಾಗವಹಿಸುತ್ತಿದ್ದು, ಕಾರ್ಯಾಚರಣೆಯ ಅವಧಿಯಲ್ಲಿ ಸಾರ್ವಜನಿಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.