ಔರಂಗಾಬಾದ್ ಪೂರ್ವ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡ 32 ಅಭ್ಯರ್ಥಿಗಳು
ಔರಂಗಾಬಾದ್, ಮಹಾರಾಷ್ಟ್ರ, ಅ.26: ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಮತ್ತು ಎಐಐಎಂಐಎಂ ಅಭ್ಯರ್ಥಿಯನ್ನು ಹೊರತುಪಡಿಸಿ, ಉಳಿದ 32 ಅಭ್ಯರ್ಥಿಗಳು ಔರಂಗಾಬಾದ್ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಮರಾಠವಾಡ ಪ್ರದೇಶದ 46 ಕ್ಷೇತ್ರಗಳ ಪೈಕಿ ಈ ಕ್ಷೇತ್ರದಲ್ಲಿ ಅತಿ ಹೆಚ್ಚು 34 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಜೆಪಿ ಸರ್ಕಾರದ ಕೈಗಾರಿಕಾ ಸಚಿವ ಅತುಲ್ ಸೇವ್ ಮತ್ತು ಎಐಐಎಂ ಅಭ್ಯರ್ಥಿಗಳಾದ ಡಾ. ಗಫ್ಫಾರ್ ಖಾದ್ರಿ ನಡುವೆ ನಿಕಟ ಸ್ಪರ್ಧೆ ನಡೆದಿದ್ದು, ಇದರಲ್ಲಿ ಅತುಲ್ ಅವರು 13,900 ಮತಗಳಿಂದ ಗೆದ್ದಿದ್ದಾರೆ. ಎಸ್ಪಿ, ಬಿಎಸ್ಪಿ ಮತ್ತು ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ 32 ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. ಅತುಲ್ ಸೇವ್ ಅವರು ಡಾ.ಖಾದ್ರಿ ಅವರನ್ನು ಎರಡನೇ ಬಾರಿ ಸೋಲಿಸಿ ಕ್ಷೇತ್ರವನ್ನುಉಳಿಸಿಕೊಂಡಿದ್ದಾರೆ. 2014ರ ಚುನಾವಣೆಯಲ್ಲಿ, ಅತುಲ್ ಅವರು ಶಿವಸೇನೆಯ ಅಭ್ಯರ್ಥಿಯ ವಿರುದ್ಧ 4000 ಮತಗಳ ಅಂತರದಿಂದ ಗೆದ್ದಿದ್ದರು. ಆಗ ಶಿವಸೇನೆ ಪ್ರತ್ಯೇಕವಾಗಿ ಸ್ಪರ್ಧಿಸಿತ್ತು. ಆದಾಗ್ಯೂ, ಈ ಬಾರಿ ಬಿಜೆಪಿ ಮತ್ತು ಶಿವಸೇನೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 