ಅಧಿಕಾರಿಗಳ ಮಧ್ಯಪ್ರವೇಶ: 3 ಬಾಲ್ಯವಿವಾಹಕ್ಕೆ ಬಿತ್ತು ಬ್ರೇಕ್
ಬಳ್ಳಾರಿ, ಮೇ 21: ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ಬ್ರೇಕ್ ಬಿದ್ದಿದೆ.
ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ ಅವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಂಡವು ಪೊಲೀಸ್ ಇಲಾಖೆಯೊಡಗೂಡಿ ನಡೆಸಿದ ಕಾಯರ್ಾಚರಣೆಯಲ್ಲಿ ಮದುವೆಗೆ ಬ್ರೇಕ್ ಬಿದ್ದಿದೆ. ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಅನುಸಾರ ಕಾರ್ಯಪ್ರವೃತ್ತರಾದ ಸಿಡಿಪಿಒ ಅಮರೇಶ ಅವರು ಈ ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಕಾನೂನು ತಿಳಿವಳಿಕೆ ನೋಟಿಸ್ ನೀಡಿ ಅವರಿಂದ ಮುಚ್ಚಳಿಕೆ ಬರೆಸಿಕೊಂಡರು.ಈ ಸಂದರ್ಭದಲ್ಲಿ ಸಿಡಿಪಿಒ ಅಮರೇಶ ಅವರು ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಚಿದಾನಂದ, ಪೊಲೀಸ್ ಇಲಾಖೆಯ ನಾಗನಗೌಡ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 