ಅಧಿಕಾರಿಗಳ ನಿರ್ಲಕ್ಷ್ಯ : ಸ್ವಂತ ಹಣದಲ್ಲಿ ರಸ್ತೆ ಗುಂಡಿ ಮುಚ್ಚಿದ ಗ್ರಾಮಸ್ಥರು
Officials' negligence: Villagers use their own money to close potholes
ಲೋಕದರ್ಶನ ವರದಿ
ಹೂವಿನಹಡಗಲಿ 18: ಗುಂಡಿ ಬಿದ್ದ ರಸ್ತೆಗಳ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರೂ ಕ್ಯಾರೆ ಎನ್ನಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು, ಕೊನೆಗೆ ಸ್ವಂತ ಹಣದಲ್ಲಿ ರಸ್ತೆ ಗುಂಡಿಗೆ ಮಣ್ಣು ಹಾಕಿ ದುರಸ್ತಿ ಮಾಡಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.ಹೂವಿನಹಡಗಲಿ ತಾಲೂಕಿನ ಮೀರಕೊರನಹಳ್ಳಿ ಯಿಂದ ಶಿವಲಿಂಗನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಯಲ್ಲಿ ಬಿದ್ದಿರುವ ಆಳವಾದ ಗುಂಡಿಗಳನ್ನು ಗ್ರಾಮಸ್ಥರು ಗುಂಡಿಗಳಿಗೆ ಮಣ್ಣು ಹಾಕಿ, ತಾತ್ಕಾಲಿಕವಾಗಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಅಧಿಕಾರಿಗಳು ನಿರ್ಲಕ್ಷ್ಯ ಹಾಗೂ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವುದನ್ನು ಕಂಡು ಬೇಸತ್ತು ಗ್ರಾಮಸ್ಥರು ಸ್ವತಃ ರಸ್ತೆಗಿಳಿದುಜೆಸಿಬಿ, ಟ್ರ್ಯಕ್ಟರ್ ಬಾಡಿಗೆಗಾಗಿ ?20 ಸಾವಿರ ವಂತಿಗೆ ಸಂಗ್ರಹಿಸಿ, ರಸ್ತೆಯ ಗುಂಡಿಗಳನ್ನು ಮುಚ್ಚಿದ್ದಾರೆ.ಗ್ರಾಮದ ಯುವಕರಾದ ಬಿ.ಮಲ್ಲಿಕಾರ್ಜುನ ಗೌಡ, ಸಂಘರ್ಷ, ವಿರೂಪಾಕ್ಷಯ್ಯ, ಪ್ರವೀಣ, ಗುಡಿ ಪ್ರವೀಣ, ಆರ್. ದ್ಯಾಮಜ್ಜ, ನಾಗರಾಜ ಇತರರು ರಸ್ತೆ ದುರಸ್ತಿಯ ನೇತೃತ್ವ ವಹಿಸಿದ್ದರು.ಚಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 