ಒಣದ ಗಿಡಗಳು ತೆರವುಗೊಳಿಸದಿದ್ದರೆ ಅಧಿಕಾರಿಗಳೇ ಹೊಣೆ
Officials are responsible if dead plants are not cleared.
ಲಕ್ಷ್ಮೇಶ್ವರ 04 : " ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರುಗಡೆ ಬರುವ ಪಶು ಆಸ್ಪತ್ರೆ ಕಂಪೌಂಡ ಒಳಗಡೆ ಇರುವ ಎರಡು ಸಂಪೂರ್ಣ ಒಣಗಿರುವ 2 ಗಿಡಗಳಿಗಳು ಬೀಳುವ ಹಂಚಿನಲ್ಲಿದ್ದು ಅವುಗಳು ಗಾಳಿ ಮಳೆಗೆ ಬಿದ್ದು ಯಾವುದೇ ಅನಾಹುತ ಸಂಭವಿಸುವ ಮುನ್ನ ತೆರವುಗೊಳಿಸುವಂತೆ ಸ್ಥಳೀಯ ನಿವಾಸಿಗಳಾದ ಸೋಮಣ್ಣ ನಂದೆಣ್ಣವರ ಎಸ್ ಜಿ ಎಲಿಗಾರ ಮಜಿದ್ ಕಿಲ್ಲೇದಾರ ಅವರು ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಗೆ ಮತ್ತು ಶಿರಹಟ್ಟಿ ವಲಯ ಅರಣ್ಯ ಅಧಿಕಾರಿಗಳಿಗೆ ತಿಳಿಸಿ ಮಾಹಿತಿ ನೀಡಿದರು ಸಹ ಇಲ್ಲಿವರೆಗೂ ಒಣಗಿದ ಗಿಡಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ ಅಧಿಕಾರಿಗಳ ನಿರ್ಲಕ್ಷತನ ಹೀಗೆ ಮುಂದುವರೆದರೆ ಒಣಗಿದ ಗಿಡಗಳು ಬಿದ್ದು ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ನೇರ ಹೊಣೆಗಾರರು ಅಧಿಕಾರಿಗಳೇ ಆಗುತ್ತಾರೆ ಎಂದು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆಹಾಗೂ ಇದೇ ವಿಷಯವಾಗಿ ಈಗಾಗಲೇ ಕೆಲ ಪತ್ರಿಕೆಗಳಲ್ಲಿ ವರದಿ ಸಹ ಪ್ರಕಟವಾಗಿದೆ ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಇನ್ನಾದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಅನಾಹುತ ಸಂಭವಿಸುವ ಮುನ್ನ ಒಣಗಿದ ಗಿಡಗಳನ್ನು ತೆರವುಗೊಳಿಸಲು ಮುಂದಾಗಬೇಕು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 