ಬೆಳೆ ಹಾನಿಯಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ, ಪರೀಶೀಲನೆ
Officials visit and inspect crop damage areas
ಯರಗಟ್ಟಿ, 02 ; ಮಳೆಯಿಂದ ರೈತರಿಗೆ ಉಂಟಾಗಿರುವ ಬೆಳೆ ಹಾನಿ ಪರಿಹಾರ ಒದಗಿಸಿಕೊಡುವ ಸಂಬಂಧ ಯರಗಟ್ಟಿ ತಾಲೂಕಿನ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ಎಂ. ವ್ಹಿ. ಗುಂಡಪ್ಪಗೋಳ ಹಾಗೂ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಪ್ರಕಾಶ ಪಾಟೀಲ ಭೇಟಿ ನೀಡಿ ಪರೀಶೀಲಿಸಿದರು.
ಯರಗಟ್ಟಿ ಸ್ಥಳೀಯ, ಸತ್ತಿಗೇರಿ, ಗುಡುಮಕೇರಿ, ಬೂದಿಗೋಪ್ಪ, ಗ್ರಾಮದಲ್ಲಿ ಮಳೆಯಿಂದ ಬೆಳೆ ಹಾನಿಯಾದ ಸ್ಥಳಗಳಿ ಶುಕ್ರವಾರ ಭೇಟಿ ನೀಡಿದ ತಹಸೀಲ್ದಾರ್ ತಹಶೀಲ್ದಾರ ಎಮ್ ವ್ಹಿ. ಗುಡಪ್ಪಗೋಳ ಮಾತನಾಡಿ, ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಸತತವಾಗಿ ಬಿದ್ದ ಮಳೆಯಿಂದಾಗಿ ರೈತರು ನಾಟಿ ಮಾಡಿದ್ದ ಹೆಸರು, ಉದ್ದು, ಸೊಯಾಬೀನ್ ಸೇರಿದಂತೆ ತೋಟಗಾರಿಕೆಯ ಹೂವು, ಉಳ್ಳಾಗಡ್ಡಿ ಸೇರಿದಂತೆ ಹಲವು ಬೆಳೆಗಳು ನಾಶವಾಗಿವೆ.
ಈ ಸಂದರ್ಭದಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಮೇಶ ಹವರಡ್ಡಿ, ಕೃಷಿ ಅಧಿಕಾರಿ ಎಸ್.ಎಲ್. ದೇಸಾಯಿ, ಕಂದಾಯ ನೀರೀಕ್ಷಕ ವಾಯ್ ಎಫ್ ಮುರ್ತೇಣ್ಣವರ, ಗ್ರಾಮ ಆಡಳಿತಾಧಿಕಾರಿ ಎ.ಬಿ. ಹುಣಶ್ಯಾಳ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆಯಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 