4ರಂದು ಓಕಳಿ ಕಾರ್ಯಕ್ರಮ: ಅನಿಷ್ಟ ಪದ್ಧತಿ ನಿಲ್ಲಿಸಲು ಸೂಚನೆ
Okali program on the 4th: Instructions to stop the evil practice
ಸಮೀರವಾಡಿ 03: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸೈದಾಪೂರ ಗ್ರಾಮದಲ್ಲಿ ದಿ. 4ರಂದು ಸಾಯಂಕಾಲ 4ಗಂಟೆಗೆ ಓಕಳಿ ಕಾರ್ಯಕ್ರಮ ಜರುಗಲಿದೆ. ಓಕಳಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರ ಗೌರವಕ್ಕೆ ಧಕ್ಕೆತರುವ ಅನಿಷ್ಟ ಪದ್ಧತಿ ಜಾರಿಯಲ್ಲಿತ್ತು. ಇದನ್ನು ತಡೆಗಟ್ಟುವಂತೆ ಜಮಖಂಡಿ ಉಪವಿಭಾಗಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಮುಧೋಳ ಅವರು ಸೈದಾಪೂರ ಗಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ನೋಟಿಸ ಕಳಿಸಿದ ಹಿನ್ನೆಲೆಯಲ್ಲಿ ದಿ. 3ರಂದು ಸೈದಾಪೂರ ಗಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ ಹಿರೇಕುರುಬರ ಗ್ರಾಮದ ಎಲ್ಲ ಸಮುದಾಯದ ಮುಖಂಡರ ಸಭೆ ಕರೆದು ಈ ಪದ್ಧತಿಯನ್ನು ಮುಂದುವರೆಸದಂತೆ ಸೂಚಿಸಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಹಿಳೆಯರ ಗೌರವಕ್ಕೆ ಧಕ್ಕೆತರುವ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಿ ಮಹಿಳೆಯರನ್ನು ಬಳಸಿಕೊಂಡು ಓಕಳಿ ಆಡದಂತೆ ಜಾಗೃತಿ ಮೂಡಿಸಲು ಕಾನೂನು ಪ್ರಕಾರ ತಪ್ಪು ಅರ್ಜಿ ಸ್ವೀಕೃತವಾಗಿದ್ದು ಅನಿಷ್ಠ ಪದ್ದತಿಯನ್ನು ತಡೆಗಟ್ಟುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.ಅನಿಷ್ಟ ಪದ್ಧತಿ ಗ್ರಾಮದಲ್ಲಿ ಆಚರಣೆ ಆಗದಂತೆ ಮುಂಜಾಗ್ರತೆಯಾಗಿ ಗ್ರಾಮದ ಹಿರಿಯರು ಮುಖಂಡರನ್ನ ಗ್ರಾಮ ಪಂಚಾಯತ ಕಚೇರಿಯಲ್ಲಿ ಸಭೆಗೆ ಆಹ್ವಾನಿಸಿ ಗ್ರಾಮದಲ್ಲಿ ಇಂತಹ ಅನಿಷ್ಟ ಪದ್ಧತಿ ಕಾರ್ಯಕ್ರಮ ಆಚರಣೆ ಮಾಡಬಾರದು ಎಂದು ಗಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ ಹಿರೇಕುರುಬರ ಮನವರಿಕೆ ಮಾಡಿದರು. ಸಭೆಯಲ್ಲಿ ಹಾಜರಾದ ಗ್ರಾಮದ ಹಿರಿಯರು ಮತ್ತು ಮುಖಂಡರು ಕಾನೂನು ಪ್ರಕಾರವಾಗಿ ನಾವು ಕಾರ್ಯಕ್ರಮ ನಿರ್ವಹಿಸುತ್ತೇವೆ. ಈ ಅನಿಷ್ಟ ಪದ್ಧತಿ ತಡೆಗೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 