4ರಂದು ಓಕಳಿ ಕಾರ್ಯಕ್ರಮ: ಅನಿಷ್ಟ ಪದ್ಧತಿ ನಿಲ್ಲಿಸಲು ಸೂಚನೆ
Okali program on the 4th: Instructions to stop the evil practice
ಸಮೀರವಾಡಿ 03: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸೈದಾಪೂರ ಗ್ರಾಮದಲ್ಲಿ ದಿ. 4ರಂದು ಸಾಯಂಕಾಲ 4ಗಂಟೆಗೆ ಓಕಳಿ ಕಾರ್ಯಕ್ರಮ ಜರುಗಲಿದೆ. ಓಕಳಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರ ಗೌರವಕ್ಕೆ ಧಕ್ಕೆತರುವ ಅನಿಷ್ಟ ಪದ್ಧತಿ ಜಾರಿಯಲ್ಲಿತ್ತು. ಇದನ್ನು ತಡೆಗಟ್ಟುವಂತೆ ಜಮಖಂಡಿ ಉಪವಿಭಾಗಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಮುಧೋಳ ಅವರು ಸೈದಾಪೂರ ಗಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ನೋಟಿಸ ಕಳಿಸಿದ ಹಿನ್ನೆಲೆಯಲ್ಲಿ ದಿ. 3ರಂದು ಸೈದಾಪೂರ ಗಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ ಹಿರೇಕುರುಬರ ಗ್ರಾಮದ ಎಲ್ಲ ಸಮುದಾಯದ ಮುಖಂಡರ ಸಭೆ ಕರೆದು ಈ ಪದ್ಧತಿಯನ್ನು ಮುಂದುವರೆಸದಂತೆ ಸೂಚಿಸಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಹಿಳೆಯರ ಗೌರವಕ್ಕೆ ಧಕ್ಕೆತರುವ ಅನಿಷ್ಟ ಪದ್ಧತಿಗೆ ಕಡಿವಾಣ ಹಾಕಿ ಮಹಿಳೆಯರನ್ನು ಬಳಸಿಕೊಂಡು ಓಕಳಿ ಆಡದಂತೆ ಜಾಗೃತಿ ಮೂಡಿಸಲು ಕಾನೂನು ಪ್ರಕಾರ ತಪ್ಪು ಅರ್ಜಿ ಸ್ವೀಕೃತವಾಗಿದ್ದು ಅನಿಷ್ಠ ಪದ್ದತಿಯನ್ನು ತಡೆಗಟ್ಟುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.ಅನಿಷ್ಟ ಪದ್ಧತಿ ಗ್ರಾಮದಲ್ಲಿ ಆಚರಣೆ ಆಗದಂತೆ ಮುಂಜಾಗ್ರತೆಯಾಗಿ ಗ್ರಾಮದ ಹಿರಿಯರು ಮುಖಂಡರನ್ನ ಗ್ರಾಮ ಪಂಚಾಯತ ಕಚೇರಿಯಲ್ಲಿ ಸಭೆಗೆ ಆಹ್ವಾನಿಸಿ ಗ್ರಾಮದಲ್ಲಿ ಇಂತಹ ಅನಿಷ್ಟ ಪದ್ಧತಿ ಕಾರ್ಯಕ್ರಮ ಆಚರಣೆ ಮಾಡಬಾರದು ಎಂದು ಗಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ ಹಿರೇಕುರುಬರ ಮನವರಿಕೆ ಮಾಡಿದರು. ಸಭೆಯಲ್ಲಿ ಹಾಜರಾದ ಗ್ರಾಮದ ಹಿರಿಯರು ಮತ್ತು ಮುಖಂಡರು ಕಾನೂನು ಪ್ರಕಾರವಾಗಿ ನಾವು ಕಾರ್ಯಕ್ರಮ ನಿರ್ವಹಿಸುತ್ತೇವೆ. ಈ ಅನಿಷ್ಟ ಪದ್ಧತಿ ತಡೆಗೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 