ಪ್ರತ್ಯೇಕ ವಾರ್ಡ್ನಲ್ಲಿ ವೃದ್ಧ ಆತ್ಮಹತ್ಯೆ: ಪರೀಕ್ಷಾ ವರದಿಯಲ್ಲಿ ಕೊರೊನಾವೈರಸ್ ನೆಗೆಟೀವ್
ಅರಿಯಲೂರು, ಏಪ್ರಿಲ್ 11,ತಮಿಳುನಾಡಿನ ಅರಿಯಲೂರು ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ದಿನಗೂಲಿ ಕೂಲಿ ಕಾರ್ಮಿಕ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಅರಿಯಲೂರು ಜಿಲ್ಲೆಯ ಅರಕಟಲೈ ಗ್ರಾಮದ ನಿವಾಸಿ ಪಿ. ನಾರಾಯಣನ್ (60) ಕೇರಳದಲ್ಲಿ ದಿನಗೂಲಿ ಕಾರ್ಮಕನಾಗಿ ಕೆಲಸ ಮಾಡುತ್ತಿದ್ದು, ಮಾರ್ಚ್ 23 ರಂದು ತಮ್ಮ ಸ್ವಂತ ಊರಿಗೆ ಮರಳಿದ್ದ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಏಪ್ರಿಲ್ 6 ರಂದು ಶೀತ ಮತ್ತು ಜ್ವರದಿಂದ ಬಳಲುತ್ತಿದ್ದ ಆತ ತಾನಾಗಿಯೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ. ಆತನನ್ನು ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನ ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿತ್ತು. ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ತಿರುಚಿನಾಪಳ್ಳಿಯ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆಸ್ಪತ್ರೆ ಸಿಬ್ಬಂದಿ ಕೊಣೆಯ ಬಾಗಿಲು ತೆರೆದು ನೋಡಿದಾಗ ನಾರಾಯಣನ್ ಟವೆಲ್ ನಿಂದ ಕೋಣೆಯ ಕಿಟಕಿ ಗ್ರಿಲ್ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಆದರೆ, ಆತ್ಮಹತ್ಯೆ ಮಾಡಿಕೊಂಡ ಕೆಲವೇ ನಿಮಿಷಗಳಲ್ಲಿ, ಕೊರೊನಾವೈರಸ್ ಸೋಂಕಿನ ಪರೀಕ್ಷಾ ವರದಿಯಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಕೊವಿದ್-19 ಭಯದಿಂದ ಇಲ್ಲವೇ ಕೌಟುಂಬಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂಬ ಬಗ್ಗೆ ತಿಳಿದು ಬಂದಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ನಿಮಿಷಗಳಲ್ಲಿ, ಕೊರೊನಾವೈರಸ್ ಅವರ ಪರೀಕ್ಷಾ ಫಲಿತಾಂಶಗಳು .ಣಾತ್ಮಕವಾಗಿವೆ. ಅವರು COVID-19 ಭಯದಿಂದ ಅಥವಾ ಕುಟುಂಬ ವಿವಾದದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ತಿಳಿದಿಲ್ಲ.ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 