ಪ್ರತ್ಯೇಕ ವಾರ್ಡ್ನಲ್ಲಿ ವೃದ್ಧ ಆತ್ಮಹತ್ಯೆ: ಪರೀಕ್ಷಾ ವರದಿಯಲ್ಲಿ ಕೊರೊನಾವೈರಸ್ ನೆಗೆಟೀವ್
ಅರಿಯಲೂರು, ಏಪ್ರಿಲ್ 11,ತಮಿಳುನಾಡಿನ ಅರಿಯಲೂರು ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ದಿನಗೂಲಿ ಕೂಲಿ ಕಾರ್ಮಿಕ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಅರಿಯಲೂರು ಜಿಲ್ಲೆಯ ಅರಕಟಲೈ ಗ್ರಾಮದ ನಿವಾಸಿ ಪಿ. ನಾರಾಯಣನ್ (60) ಕೇರಳದಲ್ಲಿ ದಿನಗೂಲಿ ಕಾರ್ಮಕನಾಗಿ ಕೆಲಸ ಮಾಡುತ್ತಿದ್ದು, ಮಾರ್ಚ್ 23 ರಂದು ತಮ್ಮ ಸ್ವಂತ ಊರಿಗೆ ಮರಳಿದ್ದ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಏಪ್ರಿಲ್ 6 ರಂದು ಶೀತ ಮತ್ತು ಜ್ವರದಿಂದ ಬಳಲುತ್ತಿದ್ದ ಆತ ತಾನಾಗಿಯೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ. ಆತನನ್ನು ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನ ಪ್ರತ್ಯೇಕ ಕೋಣೆಯಲ್ಲಿ ಇರಿಸಲಾಗಿತ್ತು. ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ತಿರುಚಿನಾಪಳ್ಳಿಯ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆಸ್ಪತ್ರೆ ಸಿಬ್ಬಂದಿ ಕೊಣೆಯ ಬಾಗಿಲು ತೆರೆದು ನೋಡಿದಾಗ ನಾರಾಯಣನ್ ಟವೆಲ್ ನಿಂದ ಕೋಣೆಯ ಕಿಟಕಿ ಗ್ರಿಲ್ಗೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಆದರೆ, ಆತ್ಮಹತ್ಯೆ ಮಾಡಿಕೊಂಡ ಕೆಲವೇ ನಿಮಿಷಗಳಲ್ಲಿ, ಕೊರೊನಾವೈರಸ್ ಸೋಂಕಿನ ಪರೀಕ್ಷಾ ವರದಿಯಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಕೊವಿದ್-19 ಭಯದಿಂದ ಇಲ್ಲವೇ ಕೌಟುಂಬಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂಬ ಬಗ್ಗೆ ತಿಳಿದು ಬಂದಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ನಿಮಿಷಗಳಲ್ಲಿ, ಕೊರೊನಾವೈರಸ್ ಅವರ ಪರೀಕ್ಷಾ ಫಲಿತಾಂಶಗಳು .ಣಾತ್ಮಕವಾಗಿವೆ. ಅವರು COVID-19 ಭಯದಿಂದ ಅಥವಾ ಕುಟುಂಬ ವಿವಾದದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ತಿಳಿದಿಲ್ಲ.ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 