ಶಿವರಾತ್ರಿ ನಿಮಿತ್ಯ ಮುಕ್ತಿನಾಥೇಶ್ವರ ಬಿಲ್ವಾರ್ಚನೆ, ಪುಷ್ಪಾಲಂಕಾರ ರುದ್ರಾ ಅಭಿಷೇಕ
On the occasion of Shivaratri, Muktinatheshwara Bilvarchane, flower decoration and Rudra Abhishekam
ಕಂಪ್ಲಿ 15 : ಸ್ಥಳೀಯ ಸಕ್ಕರೆ ಕಾರ್ಖಾನೆಯ ಬಳಿಯ ಮುಕ್ತಿನಾಥೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಶ್ರದ್ಧೆಯಿಂದ ಭಾನುವಾರ ಜರಗಿದವು ದೇವಸ್ಥಾನದ ಅರ್ಚಕಾ ನಿರಂಜನಯ್ಯಸ್ವಾಮಿ ನೇತೃತ್ವದಲ್ಲಿ ಬೆಳಿಗ್ಗೆಯಿಂದ ಬಸ್ಮಾ ಮತ್ತು ರುದ್ರಾ ಅಭಿಷೇಕ ನಡೆದಿದೆ. ನಂತರ ಬಿಲ್ವಾರ್ಚನೆ, ಪುಷ್ಪಾಲಂಕಾರ ಸೇರಿ ನಾನಾ ಪೂಜೆ ಪುನಸ್ಕಾರಗಳು ಶಾಸ್ತ್ರೋಕ್ತವಾಗಿ ನೆರವೇರಿದವು ಸಾಕಷ್ಟು ಭಕ್ತರು ಇಲ್ಲಿನ ಶಿವಲಿಂಗ ಹೊಂದಿರುವ ಮುಕ್ತಿನಾಥೇಶ್ವರ ದೇವರ ದರ್ಶನ ಪಡೆದರು. ಪುರಸಭೆ ಮಾಜಿ ಸದಸ್ಯೆ ಹೇಮಾವತಿ ಪೂರ್ಣಚಂದ್ರ ಕುಟುಂಬದವರು ಸಂಜೆ ಉಪಹಾರದ ವ್ಯವಸ್ಥೆ ಕಲ್ಪಿಸಿದ್ದರು.ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯೆ ಹೇಮಾವತಿ ಪೂರ್ಣಚಂದ್ರ, ಮುಖಂಡರಾದ ಅರವಿ ಬಸವನಗೌಡ,ಎ.ಶರಣಗೌಡ, ಶ್ರೀಲೇಖಾ, ಸಿರುಗುಪ್ಪ ತಿಮ್ಮಪ್ಪ, ಮಹೇಶ, ನಾಗರಾಜ, ಮಕ್ಕಳಾದ ಎ.ರೋಹಿತ್ ಗೌಡ, ಎ.ಬಸವನಗೌಡ, ಎ.ಸಂಜಯ ಸೇರಿದಂತೆ ಭಕ್ತರು ಇದ್ದರು.
ಫೆ02ಪಟ್ಟಣದ ಸಕ್ಕರೆ ಕಾರ್ಖಾನೆಯ ಮುಕ್ತಿನಾಥೇಶ್ವರ ದೇವಾಲಯದಲ್ಲಿ ಶಿವರಾತ್ರಿ ನಿಮಿತ್ಯ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 