ಮತ್ತೆ ಏಕಾಏಕೀ ಶನೇಶ್ವರ ದೇವಸ್ಥಾನ ತೆರವುಗೊಳಿಸಿದ ರೈಲ್ವೆ ಇಲಾಖೆ
ಬೆಂಗಳೂರು, ಅ 19: ಮೆಜೆಸ್ಟಿಕ್ ಸಮೀಪದ ಶನೇಶ್ವರ ದೇವಸ್ಥಾನಕ್ಕೆ ಇಂದು ಸಾಕಷ್ಟು ಭಕ್ತರು ದೇವರ ದರ್ಶನ ಪಡೆಯಲು ಬಂದಿದ್ದರು. ಆದರೆ, ದೇವಸ್ಥಾನವನ್ನು ರೈಲ್ವೇ ಇಲಾಖೆ ಏಕಾಏಕೀ ತೆರಳುಗೊಳಿಸಿರುವುದನ್ನು ಕಂಡು ದಂಗಾಗಿದ್ದಾರೆ.
ಹೈಕೋರ್ಟ್ ಆದೇಶದಂತೆ ರೈಲ್ವೇ ಇಲಾಖೆಯ ಸಿಬ್ಬಂದಿ ಇಲಾಖೆಯ ಜಾಗದಲ್ಲಿದ್ದ ಶನೇಶ್ವರ ದೇವಸ್ಥಾನವನ್ನು ಸ್ಥಳಾಂತರಿಸಿದ್ದಾರೆ. ಆದರೆ, ಈ ಬಗ್ಗೆ ಮಾಹಿತಿ ಇರದ ಭಕ್ತರು ಇಂದು ಶನೇಶ್ವರ ದೇವಸ್ಥಾನಕ್ಕೆ ಬಂದಿದ್ದಾರೆ. ದೇಗುಲ, ದೇವರ ಮೂರ್ತಿ ಇರದಿದ್ದನ್ನು ಕಂಡ ಭಕ್ತರು ರೈಲ್ವೇ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈಲ್ವೇ ಇಲಾಖೆ ಸಿಬ್ಬಂದಿಯು ಶನೇಶ್ವರನ ಮೂರ್ತಿಯನ್ನು ಶ್ರೀರಾಮಪುರದ ಅಯ್ಯಪ್ಪ ದೇಗುಲದಲ್ಲಿ ಇಟ್ಟಿದ್ದಾರೆ. ಆದರೆ, ದೇವರ ಪಾದವನ್ನು ಮಾತ್ರ ಅಲ್ಲಿಯೇ ಬಿಟ್ಟಿದ್ದಾರೆ. ಇದನ್ನು ನೋಡಿದ ಭಕ್ತರು ರೈಲ್ವೇ ಇಲಾಖೆ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದಾರೆ.
ನಲವತ್ತು ವರ್ಷಗಳಿಂದ ಶನೇಶ್ವರ ದೇವಸ್ಥಾನ ಒಂದೇ ಸ್ಥಳದಲ್ಲಿದೆ. ಆದರೆ, ಅದನ್ನು ಪದೇ ಪದೇ ರೈಲ್ವೇ ಇಲಾಖೆಯವರು ಸ್ಥಳಾಂತರಿಸುತ್ತಿದ್ದಾರೆ. ಹೀಗೆ ಮಾಡಿದರೆ ಹೇಗೆ. ಇಲ್ಲಿಗೆ ಬಂದು ದೇವರ ದರ್ಶನ ಪಡೆದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇತ್ತು. ಇಷ್ಟು ಜಾಗ ಖಾಲಿ ಇದೆ. ಇದರಲ್ಲಿ ದೇವಸ್ಥಾನಕ್ಕೆ ಒಂದಿಷ್ಟು ಜಾಗ ಬಿಟ್ಟಿದ್ದರೆ ಏನಾಗುತ್ತಿತ್ತು ಎಂದು ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.
ಇದುವರೆಗೂ ಮೂರು ಬಾರಿ ಶನೇಶ್ವರ ದೇವಸ್ಥಾನವನ್ನು ಸ್ಥಳಾಂತರಿಸಲಾಗಿದೆ. ಈ ಹಿಂದೆ ಶ್ರೀರಾಮಪುರದಿಂದ ಓಕಳಿಪುರಂಗೆ ದೇಗುಲವನ್ನು ಸ್ಥಳಾಂತರಿಸಲಾಗಿತ್ತು. ಬಳಿಕ ರಸ್ತೆ ಅಗಲೀಕರಣಕದ ಉದ್ದೇಶದಿಂದ ರೈಲ್ವೇ ಇಲಾಖೆ ಸಿಬ್ಬಂದಿ ಆರು ತಿಂಗಳ ಹಿಂದಷ್ಟೇ ಮೆಜೆಸ್ಟಿಕ್ ಸಮೀಪದ ಸ್ಥಳಕ್ಕೆ ಶಿಫ್ಟ್ ಮಾಡಿತ್ತು. ಇದೀಗ ಅಲ್ಲಿಂದಲೂ ಶನೇಶ್ವರನನ್ನು ಓಕಳೀಪುರಂನಲ್ಲಿರುವ ಅಯ್ಯಪ್ಪ ದೇಗುಲಕ್ಕೆ ಸ್ಥಳಾಂತರಿಸಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 