ಒಂದು ದೇಶ, ಒಂದು ಚುನಾವಣೆಗೆ ಒಂದು ಬಾರಿ ಸಂವಿಧಾನ ತಿದ್ದುಪಡಿ ಅಗತ್ಯ: ಪಿ. ರಾಜೀವ
One country, one election requires one constitutional amendment: P. Rajeev
ಒಂದು ದೇಶ, ಒಂದು ಚುನಾವಣೆಗೆ ಒಂದು ಬಾರಿ ಸಂವಿಧಾನ ತಿದ್ದುಪಡಿ ಅಗತ್ಯ: ಪಿ. ರಾಜೀವ
ಬೆಳಗಾವಿ 25: ಆಡಳಿತಕ್ಕೆ ನಿರಂತರ ಅಡ್ಡಿಯಾಗುತ್ತಿರುವ ಹಾಗೂ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿರುವ ನಿರಂತರ ಚುನಾವಣೆಗಳನ್ನು ತಪ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ಒಂದು ದೇಶ, ಒಂದು ಚುನಾವಣೆ’ ಜಾರಿಗೆ ಒಂದು ಬಾರಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿಯಾದ ಪಿ. ರಾಜೀವ ಅವರು ಹೇಳಿದ್ದಾರೆ.
ಲಿಂಗರಾಜ ಮಹಾವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.
ಒಂದು ದೇಶ, ಒಂದು ಚುನಾವಣೆ ಕುರಿತು ಗಂಭೀರ ಚರ್ಚೆಗಳು ನಡೆಯಬೇಕಿವೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಇದನ್ನು ಕೊನೆಗಾಣಿಸಬೇಕಾಗಿದೆ. ರಾಜಕೀಯ ನಾಯಕತ್ವ ಮತ್ತು ಆಡಳಿತ ಯಂತ್ರಕ್ಕೆ ನಿರಂತರ ಚುನಾವಣೆಗಳು ಅಡ್ಡಿಯಾಗಿವೆ. ಇದರಿಂದ ದೂರಗಾಮಿ ನೀತಿಗಳ ರೂಪಿಸುವ ಸಂಬಂಧ ನಡೆಯಬೇಕಾದ ಚರ್ಚೆಗಳಿಗೆ ಕಾಲಾವಕಾಶವೇ ಇಲ್ಲವಾಗಿದೆ ಎಂದರು.
ಯಾವುದೇ ರಾಜ್ಯಗಳಲ್ಲಿ ಚುನಾವಣೆ ನಡೆದರೂ ಹಿರಿಯ ಐಎಎಸ್ ಅಧಿಕಾರಿಗಳನ್ನು ವೀಕ್ಷಕರಾಗಿ ಕಳುಹಿಸಲಾಗುತ್ತದೆ. ಸಚಿವರಿಂದ ಪ್ರಧಾನಿವರೆಗೂ ಎಲ್ಲರೂ ತಮ್ಮ ಗಮನವನ್ನು ಚುನಾವಣೆಯತ್ತಲೇ ಕೇಂದ್ರೀಕರಿಸಿರುತ್ತಾರೆ. ಹೊಸ ಯೋಜನೆಗಳು ಜಾರಿಗೆ ಬಂದಿಲ್ಲ ಮತ್ತು ಸರ್ಕಾರದ ಆಡಳಿತ ಯಂತ್ರವೂ ಮಂದ ಗತಿಯಲ್ಲಿ ಸಾಗಿರುವುದನ್ನು ಗಮನಿಸಬಹುದು ಎಂದು ಹೇಳಿದರು.
ಲಿಂಗರಾಜ ಮದಾವಿದ್ಯಾಲಯದ ಪ್ರಾಚಾರ್ಯರು ಡಾ. ಹೆಚ್.ಎಸ್. ಮೇಲಿನಮನಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ವಿ.ಪಿ.ಹಿರೇಮಠ, ಪ್ರೋ. ಸುನೀತ್ ಮುಡಲಗಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಮುಖ್ಯಸ್ಥರು ಸಿದ್ದನಗೌಡ ಪಾಟೀಲ, ಹಾಗೂ ಡಾ. ನಂದನ ಕಟಾಂಬಳೆ, ಡಾ. ಹೆಚ್. ಎಂ. ಚೆನ್ನಪ್ಪಗೋಳ. ಡಾ. ಜಿ.ಎನ್. ಶೀಲಿ, ಡಾ. ಪಾಂಡುರಂಗ ಗಾಣಿಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 