ಒಂದು ದಿನದ ಅಂತರಾಷ್ಟ್ರೀಯ ಸಮ್ಮೇಳನ ಸಂಶೋಧನೆ ಕುರಿತು ಕಾರ್ಯಗಾರ
One-day international conference workshop on research
ಒಂದು ದಿನದ ಅಂತರಾಷ್ಟ್ರೀಯ ಸಮ್ಮೇಳನ ಸಂಶೋಧನೆ ಕುರಿತು ಕಾರ್ಯಗಾರ
ರಾಣೇಬೆನ್ನೂರು 21; ನಗರ ಹೊರ ವಲಯದ, ರಾಣೆಬೆನ್ನೂರು ತಾಲೂಕ ಶಿಕ್ಷಣ ಸಂಸ್ಥೆಯ, ಕಲಾ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ, ಇತ್ತೀಚೆಗೆ, ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಅಂತರಾಷ್ಟ್ರೀಯ ಸಮ್ಮೇಳನ ಸಂಶೋಧನೆ ಕುರಿತು ಕಾರ್ಯಗಾರ ನಡೆಯಿತು. ಕಾರ್ಯಗಾರವು, ಹಾವೇರಿ ವಿಶ್ವವಿದ್ಯಾಲಯ ಸಹಯೋಗ ನೀಡಿತ್ತು.
ಸಂಸ್ಥೆಯ ಅಧ್ಯಕ್ಷ ಡಾಕ್ಟರ್ ಸಂಜಯ್ ಎಸ್ ಸಾಹುಕಾರ, ಗೌರವ ಅಧ್ಯಕ್ಷ, ಶುಭಾಶ ಸಾವುಕಾರ್ ಮತ್ತು ಕಾರ್ಯದರ್ಶಿ ಶ್ರೀಮತಿ ಸೀತಾ ಕೋಟಿ ಅವರು ಜಂಟಿಯಾಗಿ ಕಾರ್ಯಾಗಾರ ಉದ್ಘಾಟಿಸಿ ಚಾಲನೆ ನೀಡಿದರು. ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜರ್ಮನಿಯ ಮ್ಯಾಕ್ಸ್ ಪ್ಲಠ್ ವಿಶ್ವವಿದ್ಯಾಲಯದ ಡಾ: ಕಾವ್ಯ ಮೋಹನ್ ಅವರು ಉಪನ್ಯಾಸ ನೀಡಿದರು. ಕಾಲೇಜು ಪ್ರಾಚಾರ್ಯ, ಪ್ರೊ: ಸಿ.ಎ.ಹರಿಹರ, ಅವರು ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದರು. ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ್ ಎಸ್. ಜಂಗಮಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ವೇದಿಕೆಯಲ್ಲಿ ಐಕ್ಯೂಸಿ ಡಾ: ಮಧುಕುಮಾರ್ ಆರ್, ಭೌತಶಾಸ್ತ್ರದ ಮುಖ್ಯಸ್ಥ ಹೆಚ್. ಜಿ. ಬಸವರಾಜ್, ಸೇರಿದಂತೆ ಮತ್ತಿತರಗಣ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು. ದಾವಣಗೆರೆ, ಹಾವೇರಿ, ರಾಣೆಬೆನ್ನೂರು ಮತ್ತಿತರ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಶ್ಮಿ ಸಂಗಡಿಗರು ಪ್ರಾರ್ಥಿಸಿದರು. ಸ್ಪಂದನಾ ರೆಡ್ಡಿ ನಾಡಗೀತೆ ಹಾಡಿದರು. ಭಾವನಾ ನಿರೂಪಿಸಿ, ವಂದಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 