ಕಬ್ಬಿನಲ್ಲಿ ಕೃಷಿ ತ್ಯಾಜ್ಯಗಳ ಮರು ಬಳಕೆ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ
One-day training program for farmers on the reuse of agricultural waste in sugarcane
ನೇಸರಗಿ 11: ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಹಾಗೂ ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕಬ್ಬಿನಲ್ಲಿ ಕೃಷಿ ತ್ಯಾಜ್ಯಗಳ ಮರು ಬಳಕೆ ಕುರಿತು ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ
ಡಾ. ಮಂಜುನಾಥ ಚೌರಡ್ಡಿಯವರು ಕಬ್ಬಿನ ಬೆಳೆಯಲ್ಲಿ ಕೃಷಿ ತ್ಯಾಜ್ಯಗಳನ್ನು ಮರು ಬಳಕೆ ಮಾಡುವುದರಿಂದ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು, ಕಳೆಗಳನ್ನು, ಬರವನ್ನು ಕಡಿಮೆಯಾಗುತ್ತದೆ. ಆದ್ದರಿಂದ ಕಬ್ಬು ಬೆಳೆಗಾರರು ಕಟಾವಾದ ಕಬ್ಬಿನ ಬೆಳೆಯಲ್ಲಿ ರವದೆಯನ್ನು ಸುಡದೇ ಮರು ಬಳಕೆ ಮಾಡಿ ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೊರಕುವ ರವದೆಯನ್ನು ಕಳಿಸುವ ಜೈವಿಕ ಗೊಬ್ಬರವನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಬಹುದೆಂದು ಹೇಳಿದರು.
ಕೃಷಿ ಸಂಶೋಧನಾ ಕೇಂದ್ರ, ಸಂಕೇಶ್ವರದ ಹಿರಿಯ ವಿಜ್ಞಾನಿ ಡಾ. ಎಸ್. ಎಸ್. ನೂಲಿಯವರು ಕಬ್ಬಿನಲ್ಲಿ ಕೃಷಿ ತ್ಯಾಜ್ಯಗಳ ಮರುಬಳಕೆ ಮತ್ತು ರವದೆ ನಿರ್ವಹಣೆಯ ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡಿದರು. ಕೇಂದ್ರದ ತೋಟಗಾರಿಕೆ ವಿಜ್ಞಾನಿ ಪ್ರವೀಣ ಯಡಹಳ್ಳಿ ಕಾರ್ಯಕ್ರಮದಲ್ಲಿ ನಿರೂಪಿಸಿದರು. ಬೆಳಗಾವಿ ಜಿಲ್ಲೆಯ 45 ಕಬ್ಬು ಬೆಳೆಗಾರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 