ಪ್ರತಿ ಐದರಲ್ಲಿ ಒಂದು ಹೆಣ್ಣು ಮಗುವಿಗೆ ಬಾಲ್ಯ ವಿವಾಹ: ಕೇಂದ್ರ ಸಚಿವೆ
ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ
ನವದೆಹಲಿ 27: ಕಳೆದ ಒಂದು ವರ್ಷದಲ್ಲಿ ಎರಡು ಲಕ್ಷ ಬಾಲ್ಯ ವಿವಾಹಗಳನ್ನು ತಡೆದಿದ್ದೇವೆ. ಆದರೂ, ದೇಶದಲ್ಲಿರುವ ಪ್ರತಿ ಐದು ಹೆಣ್ಣು ಮಕ್ಕಳಲ್ಲಿ ಒಬ್ಬರಿಗೆ 18 ವರ್ಷ ತುಂಬುವ ಮೊದಲೇ ಕಾನೂನುಬಾಹಿರವಾಗಿ ಮದುವೆ ಮಾಡಿಸಲಾಗುತ್ತಿದೆ ಎಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಬುಧವಾರ ಹೇಳಿದ್ದಾರೆ. ಇಂತಹ ಪಾಪ ಕೃತ್ಯವನ್ನು ಸಂಪೂರ್ಣವಾಗಿ ನಿಲ್ಲಿಸಬೇಕಿದೆ ಎಂದು ಒತ್ತಿ ಹೇಳಿದ್ದಾರೆ.
'ಬಾಲ ವಿವಾಹ ಮುಕ್ತ ಭಾರತ ಅಭಿಯಾನ'ಕ್ಕೆ ಚಾಲನೆ ನೀಡಿ ಮಾತನಾಡಿರುವ ಅವರು, ಬಾಲ್ಯ ವಿವಾಹ ಪ್ರಕರಣಗಳನ್ನು 2029ರ ಒಳಗಾಗಿ ಶೇ 5ಕ್ಕಿಂತ ಕೆಳಗಿಳಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಕ್ರಿಯಾಯೋಜನೆ ರೂಪಿಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕರೆ ನೀಡಿದ್ದಾರೆ.
ರಾಷ್ಟ್ರೀಯ ಸರಾಸರಿಗಿಂತಲೂ ಅತ್ಯಧಿಕ ಪ್ರಕರಣಗಳು ವರದಿಯಾಗುತ್ತಿರುವ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ರಾಜಸ್ಥಾನ, ತ್ರಿಪುರಾ, ಅಸ್ಸಾಂ ಮತ್ತು ಆಂಧ್ರ ಪ್ರದೇಶದ ಸುಮಾರು 300 ಜಿಲ್ಲೆಗಳ ಮೇಲೆ ಈ ಅಭಿಯಾನವು ಗಮನ ಹರಿಸಲಿದೆ.
'ಬಾಲ್ಯ ವಿವಾಹವು ನಮ್ಮ ಮುಂದಿರುವ ಪ್ರಮುಖ ಸವಾಲಾಗಿದೆ. ಇದು ಲಕ್ಷಾಂತರ ಹೆಣ್ಣು ಮಕ್ಕಳ ಸಾಮರ್ಥ್ಯವನ್ನು ಅಡಗಿಸುತ್ತಿದೆ. ನಮ್ಮ ದೇಶದಲ್ಲಿ ಇಂದು ಪ್ರತಿ ಐದರಲ್ಲಿ ಒಂದು ಹೆಣ್ಣು ಮಗುವಿಗೆ 18 ವರ್ಷಕ್ಕೂ ಮೊದಲೇ ಮದುವೆ ಮಾಡಲಾಗುತ್ತಿದೆ. ಬಾಲ್ಯ ವಿವಾಹದ ರೀತಿಯಲ್ಲಿಯೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ. ಕಾನಾನೂತ್ಮಕವಾಗಿ ಇದು ಅಪರಾಧ ಕೃತ್ಯ' ಎಂದು ದೇವಿ ವಿವರಿಸಿದ್ದಾರೆ.
'ಬಾಲ್ಯ ವಿವಾಹ ತಡೆ ಕಾಯ್ದೆಯಂತೆಯೇ, ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಶಾಸನಗಳಿಂದಲೇ ಎಲ್ಲ ಸಮಸ್ಯೆ ಬಗೆಹರಿಸಲಾಗದು' ಎಂದು ಪ್ರತಿಪಾದಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 