ಉತ್ತರ ಕರ್ನಾಟಕ ಸಂತ್ರಸ್ಥರಿಗೆ ಜೆಡಿಎಸ್ ಶಾಸಕರ ಒಂದು ತಿಂಗಳ ಸಂಬಳ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಆ 9 ಅತಿವೃಷ್ಟಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗಕ್ಕೆ ನೆರವಾಗಲು ಜೆಡಿಎಸ್ ಮುಂದಾಗಿದೆ
ಪಕ್ಷದ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ಉತ್ತರ ಕರ್ನಾಟಕ ಭಾಗದ ಸಂತ್ರಸ್ಥರಿಗೆ ನೀಡುತ್ತಿರುವುದಾಗಿ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದ ಜನರು ನಲುಗಿ ಹೋಗಿದ್ದು ಸಂಕಷ್ಟಕ್ಕೆ ಈಡಾಗಿದ್ದಾರೆ. ಇಂತಹ ಕಷ್ಟ ಸಂದರ್ಭದಲ್ಲಿ ಈ ಭಾಗದ ಸಹೋದರ, ಸಹೋದರಿಯರ ಜೊತೆಗೆ ನಿಲ್ಲುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದ ಜನರ ಸಂಕಷ್ಟಕ್ಕೆ ಸ್ಪಂದಿಸಿರುವ ಪಕ್ಷದ ಶಾಸಕರು ತಮ್ಮ ಒಂದು ತಿಂಗಳ ಸಂಬಳ ನೀಡುತ್ತಿರುವುದಾಗಿ ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಜ್ವರದ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೆ ಈಡಾಗಿರುವುದರಿಂದ ಸದ್ಯಕ್ಕೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಒಂದೆರಡು ದಿನಗಳಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ತೆರಳಿ ಸಂತ್ರಸ್ಥರ ಸಂಕಷ್ಟಗಳಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 