ಇರುವಷ್ಟು ದಿವಸ ದೇವರು ಮೆಚ್ಚುವ ಕೆಲಸ ಮಾಡಬೇಕು: ಮೌ.ಝಕ್ರೀಯಾ ಸಾಹಬ
One should do what pleases God as long as one has life: Maw. Zakriya Sahab
ಮಹಾಲಿಂಗಪುರ 07: ಈ ಜಗತ್ತಿನಲ್ಲಿ ನಾವು ಇರುವಷ್ಟು ದಿವಸ ದೇವರು ಮೆಚ್ಚುವಂತಹ ಕೆಲಸ ಮಾಡಿದರೆ, ನಮ್ಮ ಬದುಕು ಯಾವತ್ತೂ ನೆಮ್ಮದಿಯಿಂದ ಕೂಡಿರುತ್ತದೆ ಎಂದು ಮೌ.ಝಕ್ರೀಯಾಸಾಹಬ ಹೇಳಿದರು.
ಪಟ್ಟಣದ ಇದ್ಘಾ ಮೈದಾನದಲ್ಲಿ ಇದುಲ್ ಅಧಾ (ಬಕ್ರೀದ್) ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆಯ ಮುನ್ನ ಪ್ರವಚನ ನೀಡುತ್ತ ಮಾತನಾಡಿದ ಅವರು, ಈ ಹಬ್ಬವು ತ್ಯಾಗ ಬಲಿದಾನದ ಸಂಕೇತ ಮತ್ತು ನಮ್ಮ ಅರಿಷಡ್ವರ್ಗಗಳನ್ನು ಸರಿಯಾದ ದಿಕ್ಕಿನಲ್ಲಿ ಬಳಸಿಕ್ಕೊಂಡು ಸ್ವರ್ಗವನ್ನು ಪ್ರಾಪ್ತಿ ಮಾಡಿಕ್ಕೊಳ್ಳುವುದಾಗಿದೆ ಎಂದರು.ಶನಿವಾರ ಮುಂಜಾನೆ 9 ಗಂಟೆಗೆ ಹತ್ತು, ಹಲವು ಮಸ್ಜಿದ್ ಗಳು ಮತ್ತು ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಮುಸ್ಲಿಂ ಬಾಂಧವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಈದ್ಗಾ ಸ್ಥಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದರು.ನಂತರ ಹಿಂದೂ ಮುಸ್ಲಿಂರು ಸೇರಿ ಮೃಷ್ಟಾನ್ನ ಸವಿದರು.
ಈ ವಿಶೇಷ ಪ್ರಾರ್ಥನೆಯನ್ನು ಖಾರಿ ಜುಬೇರಸಾಹೇಬ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಸಜನಸಾಬ್ ಪೆಂಡಾರಿ, ನಜೀರ್ ಅತ್ತಾರ, ದಾವಲಸಾಬ ನಗಾರ್ಚಿ, ನಜೀರ್ ಝಾರೆ, ಜಮೀರ ಯಕ್ಸಂಬಿ, ಹಾಸಿಂ ಪೆಂಡಾರಿ, ಉಸ್ಮಾನ್ ಪೆಂಡಾರಿ, ಮಹ್ಮದ್ ಪೆಂಡಾರಿ, ಸಿರಾಜ ಪಾಂಡು, ದಾದಾ ಕರೋಶಿ, ಮೇಹಬೂಬ ಜೀರಗಾಳ ಮುಂತಾದವರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 