ಶ್ರದ್ಧೆ, ಭಕ್ತಿಯಿಂದ ಕಂಪಿಸಿದ ಓಣಿಕೇರಿ: ವಿಜೃಂಭಣೆಯಿಂದ ನಡೆದ ಶ್ರೀ ದುರ್ಗಾದೇವಿ ಜಾತ್ರೆ
Onikeri vibrates with devotion and devotion: Sri Durgadevi fair held with grandeur
ಮುಂಡಗೋಡ 22: ತಾಲ್ಲೂಕಿನ ಓಣಿಕೇರಿ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ ಶ್ರದ್ಧೆ, ಭಕ್ತಿಯಿಂದ ವಿಜೃಂಭಣೆಯಿಂದ ನಡೆಯಿತು. ದೇವಾಲಯವು ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿದ್ದು, ಗ್ರಾಮವೀಡೀ ಹಬ್ಬದ ವಾತಾವರಣಕ್ಕೆ ಮೆರಕು ನೀಡಿತ್ತು. ಜಾತ್ರೆಯ ಅಂಗವಾಗಿ ಪೂರ್ವಸಂಧ್ಯೆಯಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಉಡಿ ತುಂಬುವ ಕಾರ್ಯಕ್ರಮಗಳು ನೆರವೇರಿತು.
ಜಾತ್ರೆ ದಿನ ದೇವಿಗೆ ವಿಶೇಷ ಅಲಂಕಾರ ಮಾಡಿ ಮಹಾಪೂಜೆ ಸಲ್ಲಿಸಲಾಯಿತು. ಬೆಳಗ್ಗೆಯಿಂದಲೇ ಭಕ್ತರು ಸಾಲುಗಟ್ಟಿ ದೇವಿಯ ದರ್ಶನ ಪಡೆದರು ಮತ್ತು ತಮ್ಮ ಹರಕೆಗಳನ್ನು ಸಲ್ಲಿಸಿದರು. ಅನ್ನಸಂತರೆ್ಣ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು. ಮಹಿಳೆಯರು, ಮಕ್ಕಳು, ಯುವಕರು ಸೇರಿದಂತೆ ಎಲ್ಲಾ ವರ್ಗದ ಜನರು ಜಾತ್ರೆಯಲ್ಲಿ ಪಾಲ್ಗೊಂಡು ಹಬ್ಬದ ಉತ್ಸವವನ್ನು ರೂಪಿಸಿದರು. ಮುಂಡಗೋಡ, ಓಣಿಕೇರಿ, ಓರಲಗಿ, ಹವಗಿ, ಕಳಗಿನಕೊಪ್ಪ ಬೆಳವಟಗಿ ಗ್ರಾಮಸ್ಥರು ಮತ್ತು ಸದ್ಭಕ್ತ ಮಂಡಳಿ, ದೇವಾಲಯ ಸಮಿತಿ ಮತ್ತು ಯುವಕರ ಸಹಕಾರದಿಂದ ಜಾತ್ರೆ ಶಾಂತಿ ಮತ್ತು ಸೌಹಾರ್ದತೆಯೊಂದಿಗೆ ಯಶಸ್ವಿಯಾಗಿ ಮುಗಿಯಿತು. ಸುತ್ತಮುತ್ತಲಿನ ಗ್ರಾಮಗಳಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 