ಗಗನಕ್ಕೇರಿದ ಈರುಳ್ಳಿ ಬೆಲೆ
ಕಠ್ಮಂಡು, ಅ 4: ಈರುಳ್ಳಿ ಬೆಲೆಗಳು ಗಗನಕ್ಕೇರಿದ್ದು ಜಗತ್ತಿನಾದ್ಯಂತ ಹಾಹಾಕಾರ ಉಂಟಾಗಿದೆ. ಕಠ್ಮಂಡುನಿಂದ ಹಿಡಿದು ಬಾಂಗ್ಲಾ, ಕೊಲಂಬೋವರೆಗೂ ಇದರ ಬಿಸಿ ತಟ್ಟಿದ್ದು ವಿದೇಶಿಯರು ಸಹ ವಿಪರೀತ ಬೆಲೆಗೆ ಬೆಚ್ಚಿಬೀಳುತ್ತಿದ್ದಾರೆ. ಜಗತ್ತಿನ ಅತಿ ದೊಡ್ಡ ಈರುಳ್ಳಿ ಮಾರಾಟಗಾರನಾಗಿರುವ ಭಾರತ ಈಗ ಈರುಳ್ಳಿ ರಫ್ತನ್ನು ನಿಷೇಧ ಮಾಡಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಭಾರತದಲ್ಲಿ ಮುಂಗಾರು ಮಳೆಯ ಅಬ್ಬರಕ್ಕೆ ಕಠಾವು ವಿಳಂಬವಾಗಿದ್ದರೆ ಬಹುತೇಕ ರಾಜ್ಯದಲ್ಲಿ ಬೆಳೆ ಹಾಳಾಗಿದೆ. ಇದು ಅತ್ಯಂತ ಬಿರುಸಿನ ಬೆಲೆಯೇರಿಕೆ ಎಂದು ಕಠ್ಮಂಡು ಮಾರುಕಟ್ಟೆಯಲ್ಲಿ ತರಕಾರಿ ಖರೀದಿಸುವ ಗೃಹಿಣಿಯೊಬ್ಬರು ತಮ್ಮ ಅನುಭವ ಹೇಳಿಕೊಂಡಿದ್ದಾರೆ. ಕಳೆದ ತಿಂಗಳಿಗಿಂತಲೂ ಈರುಳ್ಳಿ ಬೆಲೆ ಈಗ ದುಪ್ಪಟ್ಟಾಗಿದೆ. ಪಾಕಿಸ್ತಾನದ ಕೋಳಿ ಸಾರಿಗಾಗಲಿ ಬಾಂಗ್ಲಾದ ಬಿರಿಯಾನಿಯಾಗಲಿ ಅಥವಾ ಭಾರತದ ಸಾಂಬಾರ್ ಇನ್ನಿತರೆ ಅಡುಗೆಗಾಗಿ ಭಾರತೀಯ ಈರುಳ್ಳಿಯನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 