ಜಾಹೀರಾತುಗಳಲ್ಲಿ ಮಾತ್ರ ರೈತರ ಸ್ಮರಣೆ : ಯುಪಿ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರಿಯಾಂಕಾ ವಾದ್ರಾ
ನವದೆಹಲಿ, ಅ 09: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ರೈತರನ್ನು ಕಡೆಗಣಿಸಿದ್ದು, ಕೇವಲ ಜಾಹೀರಾತುಗಳಲ್ಲಿ ಮಾತ್ರ ರೈತರನ್ನು ಸ್ಮರಿಸುತ್ತಿದೆ ಎಂದು ಆರೋಪಿಸಿದ್ದಾರೆ. ರೈತರ ಸಮಸ್ಯೆಯ ಬಗ್ಗೆ ಟ್ವಿಟರ್ ನಲ್ಲಿ ಪ್ರಸ್ತಾಪಿಸಿರುವ ಪ್ರಿಯಾಂಕಾ, ರೈತರಿಗೆ ಕಿರುಕುಳ ನೀಡಲು ಉತ್ತರ ಪ್ರದೇಶ ಸರ್ಕಾರ ಹೊಸ ವಿಧಾನ ಕಂಡುಕೊಂಡಿದೆ. ಸಾಲದ ಹೆಸರಿನಲ್ಲಿ ವಂಚಿಸುತ್ತಿರುವುದಲ್ಲದೆ, ವಿದ್ಯುತ್ ಬಿಲ್ ಹೆಸರಿನಲ್ಲಿ ಜೈಲಿಗಟ್ಟುತ್ತಿದೆ ಎಂದು ಟೀಕಿಸಿದ್ದಾರೆ. ಮಳೆ ಹಾಗೂ ಪ್ರವಾಹದಿಂದ ಬೆಳೆ ನಷ್ಟ ಎದುರಿಸುತ್ತಿರುವ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಟ್ವಿಟರ್ ಮೂಲಕ ಹರಿಹಾಯ್ದಿದ್ದಾರೆ. ಸಾಲದ ಹಿನ್ನೆಲೆಯಲ್ಲಿ ಮಹೊಬಾ ಮತ್ತು ಹಮಿರ್ ಪುರದ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾದ್ರಾ ಕೆಂಡ ಕಾರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 