ಜಾಹೀರಾತುಗಳಲ್ಲಿ ಮಾತ್ರ ರೈತರ ಸ್ಮರಣೆ : ಯುಪಿ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರಿಯಾಂಕಾ ವಾದ್ರಾ
ನವದೆಹಲಿ, ಅ 09: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರ ರೈತರನ್ನು ಕಡೆಗಣಿಸಿದ್ದು, ಕೇವಲ ಜಾಹೀರಾತುಗಳಲ್ಲಿ ಮಾತ್ರ ರೈತರನ್ನು ಸ್ಮರಿಸುತ್ತಿದೆ ಎಂದು ಆರೋಪಿಸಿದ್ದಾರೆ. ರೈತರ ಸಮಸ್ಯೆಯ ಬಗ್ಗೆ ಟ್ವಿಟರ್ ನಲ್ಲಿ ಪ್ರಸ್ತಾಪಿಸಿರುವ ಪ್ರಿಯಾಂಕಾ, ರೈತರಿಗೆ ಕಿರುಕುಳ ನೀಡಲು ಉತ್ತರ ಪ್ರದೇಶ ಸರ್ಕಾರ ಹೊಸ ವಿಧಾನ ಕಂಡುಕೊಂಡಿದೆ. ಸಾಲದ ಹೆಸರಿನಲ್ಲಿ ವಂಚಿಸುತ್ತಿರುವುದಲ್ಲದೆ, ವಿದ್ಯುತ್ ಬಿಲ್ ಹೆಸರಿನಲ್ಲಿ ಜೈಲಿಗಟ್ಟುತ್ತಿದೆ ಎಂದು ಟೀಕಿಸಿದ್ದಾರೆ. ಮಳೆ ಹಾಗೂ ಪ್ರವಾಹದಿಂದ ಬೆಳೆ ನಷ್ಟ ಎದುರಿಸುತ್ತಿರುವ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ಟ್ವಿಟರ್ ಮೂಲಕ ಹರಿಹಾಯ್ದಿದ್ದಾರೆ. ಸಾಲದ ಹಿನ್ನೆಲೆಯಲ್ಲಿ ಮಹೊಬಾ ಮತ್ತು ಹಮಿರ್ ಪುರದ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾದ್ರಾ ಕೆಂಡ ಕಾರಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 