ಸೋಲನ್ನು ಸವಾಲಾಗಿ ಸ್ವೀಕರಿಸಿದಾಗ ಮಾತ್ರ ಜೀವನದಲ್ಲಿ ಗೆಲುವು ಕಾಣಲು ಸಾಧ್ಯ: ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ
ಲೋಕದರ್ಶನ ವರದಿ
ಶಿರಹಟ್ಟಿ 14: ಜೀವನದಲ್ಲಿ ಸ್ಪರ್ಧೆ ನಿರಂತರವಾಗಿದ್ದು, ಕ್ರೀಡಾಪಟುಗಳು ಕ್ರೀಡೆಗಳಲ್ಲಿ ಸೋತರೆ ಎದೆಗುಂದದೇ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆಯಬೇಕು ಹಾಗೂ ಸೋಲಿಗೆ ಎದೆಗುಂದದೇ ಸೋಲನ್ನು ಸವಾಲಾಗಿ ಸ್ವೀಕರಿಸಿದಲ್ಲಿ ಮಾತ್ರ ಗೆಲುವು ಕಾಣಲು ಸಾಧ್ಯವಾಗುತ್ತದೆ ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ಕೊಂಚೀಗೇರಿ ಕರೆ ನೀಡಿದರು.
ಅವರು ಸ್ಥಳೀಯ ಎಫ್ಎಂ ಡಬಾಲಿ ತಾಲೂಕ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಅಡಿಯಲ್ಲಿ ನಡೆದ ದಸರಾ ಕ್ರೀಡಾಕೂಟಗಳನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಕ್ರೀಡೆಗಳಲ್ಲಿ ಭಾಗವಹಿಸಿ ಯಶಸ್ಸು ಗಳಿಸಬೇಕು ಎನ್ನುವ ಸಲುವಾಗಿ ಕ್ರೀಡಾಪಟುಗಳು ಅವಿರತವಾಗಿ ಶ್ರಮಿಸುತ್ತಾರೆ, ಇಂಥಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಿನ್ನಡೆಯಾದಾಗ ಬೇಸರಪಟ್ಟುಕೊಂಡು ಮುಂದಿನ ಸ್ಪಧರ್ೆಗಳಲ್ಲಿ ಭಾಗವಹಿಸಲು ಹಿಂಜರಿಯುತ್ತಾರೆ, ಆದ ಕಾರಣ ಯಾವುದೇ ಕ್ರೀಡಾಪಟುಗಳಾಗಲೀ ಕ್ರೀಡೆಗಳಿಗೆ ಜೀವಕಳೆ ತುಂಬುವ ಮೂಲಕ ಗೆಲುವನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ಸ್ಫಧರ್ಿಸಬೇಕು ಹಾಗೂ ಇತರ ಕ್ರೀಡಾಪಟುಗಳನ್ನು ಹುರುದುಂಬಿಸಿ ಕ್ರೀಡೆಗಳ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ದೇವಕ್ಕ ಲಮಾಣಿ, ತಾಪಂ ಅಧ್ಯಕ್ಷೆ ಸುಶೀಲವ್ವ ಲಮಾಣಿ, ಮಹೇಶ ಲಮಾಣಿ, ಥಾವರೆಪ್ಪ ಲಮಾಣಿ, ಶಿಕ್ಷಕರಾದ ಎಂ.ಡಿ ತಳ್ಳಳ್ಳಿ, ಬಿ.ಕೆ ದ್ಯಾವನಗೌಡರ, ಎಚ್.ಎಚ್ ದಾದನವರ, ಎಲ್.ಎಚ್ ಬಾಳೆ, ಎಂ.ಎಸ್ ಚಾಕಲಬ್ಬಿ, ಕೆ.ಪಿ ಪಾಟೀಲ, ಮಹಾಂತೇಶ ಬಳ್ಳಾರಿ, ಚನ್ನಪ್ಪ ಬೆಟಸೂರ, ಬಸವಣ್ಣೆಪ್ಪ ಹಡಪದ ಇನ್ನೂ ಅನೇಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 