ಎಲ್ಲಾ ವಿಷಯಗಳ ಬಗ್ಗೆ ಮುಕ್ತ ಚರ್ಚೆ: ಪ್ರಧಾನಿ ಮೋದಿ ಆಶಯ
ನವದೆಹಲಿ, ನ.18 : ಸಂಸತ್ತಿನ ಚಳಿಗಾಲದ ಅಧಿವೇಶನವು ಎಲ್ಲ ವಿಷಯಗಳ ಬಗ್ಗೆ ಗುಣಮಟ್ಟದ ಚರ್ಚೆಗಳಿಗೆ ಸಾಕ್ಷಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನ ಪ್ರಾರಂಭಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, ನಾವು ಎಲ್ಲಾ ವಿಷಯಗಳ ಬಗ್ಗೆ ಮುಕ್ತವಾದ ಚರ್ಚೆಗಳನ್ನು ಬಯಸುತ್ತೇವೆ. ಗುಣಮಟ್ಟದ ಚರ್ಚೆಗಳು ನಡೆಯುವುದು ಮುಖ್ಯ. ಸಂವಾದ ಮತ್ತು ಚರ್ಚೆಗಳು ಇರಬೇಕು. ಸಂಸತ್ತಿನಲ್ಲಿ ಚರ್ಚೆಗಳನ್ನು ಉತ್ಕೃಷ್ಟಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಇದು 2019 ರ ಕೊನೆಯ ಸಂಸತ್ ಅಧಿವೇಶನ ಎಂದು ಹೇಳಿದ ಪ್ರಧಾನಿ, ಇದು ರಾಜ್ಯಸಭೆಯ 250 ನೇ ಸಂಸತ್ ಅಧಿವೇಶನವಾಗಿರುವುದರಿಂದ ಈ ಸದನ ಬಹಳ ಮುಖ್ಯವಾದುದು. ಈ ಅಧಿವೇಶನದ ಸಂದರ್ಭದಲ್ಲೇ ಇದೇ 26 ರಂದು, ನಾವು ಸಂವಿಧಾನ ದಿನವನ್ನು ಆಚರಿಸುತ್ತಿದ್ದೇವೆ, ನಮ್ಮ ಸಂವಿಧಾನವು 70 ವರ್ಷಗಳನ್ನು ಪೂರೈಸಿದ ದಿನವಾಗಲಿದೆ ಎಂದು ಹೇಳಿದರು. ಹಿಂದಿನ ಸಂಸತ್ತಿನ ಅಧಿವೇಶನದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಪ್ರಧಾನಿ, ಎಲ್ಲಾ ಸಂಸದರ ಬೆಂಬಲ ಮತ್ತು ಸಕ್ರಿಯ ಭಾಗವಹಿಸುವಿಕೆಯಿಂದಾಗಿ ಹಿಂದಿನ ಅಧಿವೇಶನವು ಅದ್ಭುತವಾಗಿತ್ತು. ಅದು ಸರ್ಕಾರ ಅಥವಾ ಸ್ಪೀಕರ್ ಪೀಠ ಮಾತ್ರವಲ್ಲ ಇಡೀ ಸಂಸತ್ತಿನ ಸಾಧನೆಯಾಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 