ಕೌಶಲ್ಯಾಭಿವೃದ್ದಿ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮ
ಲೋಕದರ್ಶನ ವರದಿ
ಗೋಕಾಕ: ಮಹಿಳೆಯರು ವೃತ್ತಿಪರ ತರಬೇತಿಗಳನ್ನು ಪಡೆದು ಸ್ವಾವಲಂಭಿಗಳಾಗಿ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕೆಂದು ನಗರಸಭಾ ಸದಸ್ಯೆ ಲಕ್ಷ್ಮೀ ದೇಶನೂರ ಹೇಳಿದರು.
ಶನಿವಾರದಂದು ನಗರದ ತಾ.ಪಂ. ಸಭಾ ಭವನದಲ್ಲಿ ಇಲ್ಲಿಯ ಇನ್ಸಿಟೂಟ್ ಆಫ್ ಫ್ಯಾಶನ ಟೆಕ್ನಾಲಜಿಯವರು ಬೆಳಗಾವಿಯ ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಹಮ್ಮಿಕೊಂಡ ಕೌಶಲ್ಯಾಭಿವೃದ್ದಿ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಪರ ತರಬೇತಿಗಳನ್ನು ಪಡೆದು ಸ್ವಉದ್ಯೋಗಗಳನ್ನು ಕೈಗೊಂಡು ನೆಮ್ಮದಿ ಜೀವನ ಸಾಗಿಸಬಹುದು. ಇತರ ಸಂಸ್ಥೆಗಳಲ್ಲೂ ಉದ್ಯೋಗಗಳ ಅವಕಾಶಗಳಿವೆ. ಸಕರ್ಾರವು ಸಹಾಯಧನ ನೀಡಿ ಸ್ವಉದ್ಯೋಗ ಮಾಡಲು ಪ್ರೇರಣೆಯನ್ನು ನೀಡುತ್ತಿದ್ದು, ಇವುಗಳ ಸದುಪಯೋಗದಿಂದ ಸ್ವಾಭಿಮಾನಿಗಳಾಗಿ ಜೀವನವನ್ನು ನಡೆಸಿರೆಂದು ಸಲಹೆ ನೀಡಿದರು. ವೇದಿಕೆ ಮೇಲೆ ಸಂಸ್ಥೆಯ ಪ್ರಾಚಾಯರ್ೆ ರೀನಾ ಬಾಣಸಿ, ಶಿಕ್ಷಕಿ ಸುಜಾತಾ ಹಿರೇಮಠ ಹಾಗೂ ಮುಖಂಡ ಬಸವರಾಜ ದೇಶನೂರ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 