ವಿಪಕ್ಷಗಳ ಗದ್ದಲ : ರಾಜ್ಯಸಭೆ ಕಲಾಪ ಮಧ್ಯಾಹ್ನ 2ರವರೆಗೆ ಮುಂದೂಡಿಕೆ
ನವದೆಹಲಿ, ನ 19 : ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಮತ್ತು ಜವಾಹರ್ ಲಾಲ್ ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ವಿಷಯಗಳನ್ನು ಪ್ರಸ್ತಾಪಿಸಿ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಗದ್ದಲ ಎಬ್ಬಿಸಿದ ಪರಿಣಾಮ ಮಂಗಳವಾರದ ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲ್ಪಟ್ಟಿದೆ. ನಿಯಮ 267 ರ ಅಡಿ ಕೆಲವು ಸದಸ್ಯರು ನೊಟೀಸ್ ನೀಡಿದ್ದು ಅದನ್ನು ತಿರಸ್ಕರಿಸಲಾಗಿದೆ ಎಂದು ಸಭಾಪತಿ ಎಂ.ವೆಂಕಯ್ಯ ನಾಯ್ಡು ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಸಿ ಪಿ ಎಂ ಸದಸ್ಯರು ಗದ್ದಲ ಎಬ್ಬಿಸಿದರು. ಶಾಂತಿ ಕಾಪಾಡುವಂತೆ ವೆಂಕಯ್ಯನಾಯ್ಡು ಮಾಡಿದ ಮನವಿ ಫಲಿಸದ ಕಾರಣ ಕಲಾಪವನ್ನು ಮಧ್ಯಾಹ್ನ ಎರಡು ಗಂಟೆವರೆಗೆ ಮುಂದೂಡಲಾಯಿತು. ದೇಶದಲ್ಲಿನ ಆರ್ಥಿಕ ಸ್ಥಿತಿಯ ಕುರಿತು ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದರೆ, ಜವಹಾರ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ಸಂಬಂಧ ಚರ್ಚೆ ನಡೆಸುವಂತೆ ಸಿಪಿಎಮ್ ಆಗ್ರಹಪಡಿಸಿತು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 