ವಿಪಕ್ಷಗಳ ಗದ್ದಲ : ರಾಜ್ಯಸಭೆ ಕಲಾಪ ಮಧ್ಯಾಹ್ನ 2ರವರೆಗೆ ಮುಂದೂಡಿಕೆ
ನವದೆಹಲಿ, ನ 19 : ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಮತ್ತು ಜವಾಹರ್ ಲಾಲ್ ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ವಿಷಯಗಳನ್ನು ಪ್ರಸ್ತಾಪಿಸಿ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಗದ್ದಲ ಎಬ್ಬಿಸಿದ ಪರಿಣಾಮ ಮಂಗಳವಾರದ ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೆ ಮುಂದೂಡಲ್ಪಟ್ಟಿದೆ. ನಿಯಮ 267 ರ ಅಡಿ ಕೆಲವು ಸದಸ್ಯರು ನೊಟೀಸ್ ನೀಡಿದ್ದು ಅದನ್ನು ತಿರಸ್ಕರಿಸಲಾಗಿದೆ ಎಂದು ಸಭಾಪತಿ ಎಂ.ವೆಂಕಯ್ಯ ನಾಯ್ಡು ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಸಿ ಪಿ ಎಂ ಸದಸ್ಯರು ಗದ್ದಲ ಎಬ್ಬಿಸಿದರು. ಶಾಂತಿ ಕಾಪಾಡುವಂತೆ ವೆಂಕಯ್ಯನಾಯ್ಡು ಮಾಡಿದ ಮನವಿ ಫಲಿಸದ ಕಾರಣ ಕಲಾಪವನ್ನು ಮಧ್ಯಾಹ್ನ ಎರಡು ಗಂಟೆವರೆಗೆ ಮುಂದೂಡಲಾಯಿತು. ದೇಶದಲ್ಲಿನ ಆರ್ಥಿಕ ಸ್ಥಿತಿಯ ಕುರಿತು ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದರೆ, ಜವಹಾರ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ಸಂಬಂಧ ಚರ್ಚೆ ನಡೆಸುವಂತೆ ಸಿಪಿಎಮ್ ಆಗ್ರಹಪಡಿಸಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 