ಘಟಪ್ರಭಾ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ : ಈರಣ್ಣ ಕಡಾಡಿ
Order issued for Ghataprabha Express train halts: Iranna Kadadi
ಲೋಕದರ್ಶನ ವರದಿ
ಬೆಳಗಾವಿ 08: ಘಟಪ್ರಭಾ ಮತ್ತು ಸುತ್ತಮುತ್ತಲಿನ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಗೆ ಕೊನೆಗೂ ಯಶಸ್ಸು ಸಿಕ್ಕಿದೆ. ನಮ್ಮ ಸತತ ಪ್ರಯತ್ನ ಹಾಗೂ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆಯು, ಘಟಪ್ರಭಾ ನಿಲ್ದಾಣದಲ್ಲಿ ಪ್ರಮುಖ 4 ಜೋಡಿ ಎಕ್ಸ್ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆಗೆ ಅಧಿಕೃತ ಆದೇಶ ಹೊರಡಿಸಿದೆ ಎಂದು ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ನಿಲುಗಡೆ ಆಗಲಿರುವ ರೈಲುಗಳು: ಅಜ್ಮೀರ್ - ಮೈಸೂರು ಎಕ್ಸ್ಪ್ರೆಸ್ (16209/16210), ಅಜ್ಮೀರ್ - ಕೆ.ಎಸ್.ಆರ್ ಬೆಂಗಳೂರು ಗರೀಬ್ ನವಾಜ್ ಎಕ್ಸ್ಪ್ರೆಸ್ (16531/16532), ಗಾಂಧಿಧಾಮ್ - ಕೆ.ಎಸ್.ಆರ್ ಬೆಂಗಳೂರು ಎಕ್ಸ್ಪ್ರೆಸ್ (20685/20686), ಜೋಧ್ಪುರ - ಕೆ.ಎಸ್.ಆರ್ ಬೆಂಗಳೂರು ಎಕ್ಸ್ಪ್ರೆಸ್ (16533/16534)
ನಮ್ಮ ಭಾಗದ ಪ್ರಯಾಣಿಕರ ಹಿತದೃಷ್ಟಿಯಿಂದ ನಿಲುಗಡೆ ವ್ಯವಸ್ಥೆ ಮಾಡಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷವ, ರಾಜ್ಯ ರೈಲ್ವೆ ಸಚಿವರಾದ ವಿ ಸೋಮಣ್ಣ ಹಾಗೂ ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಸಾರ್ವಜನಿಕರು ಹಾಗೂ ಪ್ರಯಾಣಿಕರು ಈ ರೈಲು ಸೇವೆಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಾಜಿ ಸಂಸದ ಈರಣ್ಣ ಕಡಾಡಿ ಕೋರಿರುತ್ತಾರೆ.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 