ರಾಜ್ಯದ ಎಲ್ಲ ಗೋಶಾಲೆಗಳಲ್ಲಿ ದೀಪೋತ್ಸವ ಆಚರಣೆಗೆ ಆದೇಶ
ಲಕ್ನೋ, ಅ, 27: ಸರಯೂ ನದಿ ತೀರದಲ್ಲಿ 4.10 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಗಿನ್ನಿಸ್ ದಾಖಲೆ ಸ್ಥಾಪಿಸಲು ಸಿದ್ಧತೆ ನಡೆದಿರುವ ನಡುವೆಯೇ ರಾಜ್ಯದ ಎಲ್ಲ ಗೋಶಾಲೆಗಳಲ್ಲಿ ಇಂಥದ್ದೇ ದೀಪೋತ್ಸವ ಹಮ್ಮಿಕೊಳ್ಳುವಂತೆ ಉತ್ತರ ಪ್ರದೇಶದ ಗೋಸೇವಾ ಆಯೋಗ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆಯೋಗದ ಆದೇಶದ ಹಿನ್ನೆಲೆಯಲ್ಲಿ ಗೋಶಾಲೆಗಳಲ್ಲಿ ನಡೆಸುವ ದೀಪೋತ್ಸವದ ಬಗ್ಗೆ ವೀಡಿಯೊ ದಾಖಲೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. "ಗೋವುಗಳನ್ನು ದೀಪಾವಳಿ ಬಳಿಕ ಪೂಜಿಸಲಾಗುತ್ತದೆ. ಆದ್ದರಿಂದ ಗೋಶಾಲೆಗಳಲ್ಲಿ ದೀಪೋತ್ಸವ ಆಚರಿಸಬೇಕು ಎಂದು ಗೋಸೇವಾ ಆಯೋಗದ ಅಧ್ಯಕ್ಷ ಶ್ಯಾಮ್ನಂದನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ನೂರಾರು ಗೋಶಾಲೆಗಳು ಇರುವ ಹಿನ್ನೆಲೆಯಲ್ಲಿ ಅಯೋಗದ ಸೂಚನೆಯಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ. ಲಕ್ಷಾಂತರ ಹಣತೆಗಳ ಖರೀದಿಗೆ ಹಾಗೂ ನೂರಾರು ಲೀಟರ್ ಸಾಸಿವೆ ಎಣ್ಣೆಯನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಖರೀದಿಸಲು ಇಷ್ಟೊಂದು ಅಲ್ಪಾವಧಿಯಲ್ಲಿ ಸಂಪನ್ಮೂಲ ಎಲ್ಲಿಂದ ಸಂಗ್ರಹ ಮಾಡಬೇಕು ಎನ್ನುವುದು ಅಧಿಕಾರಿಗಳ ಚಿಂತೆ. ಆಯೋಗದ ನಿರ್ದೇಶನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಗೋ ದೀಪಾವಳಿಗೆ ಅಗತ್ಯ ಪರಿಕರಗಳನ್ನು ಒದಗಿಸಿಕೊಡುವ ಅನಿವಾರ್ಯತೆಗೆ ಸಿಲುಕಿ ಕೊಂಡಿದೆ. ಮೇವು ಖರೀದಿಗೇ ಹಣಕಾಸು ಮುಗ್ಗಟ್ಟು ಇರುವಾಗ , ಹಣತೆ ಮತ್ತು ಎಣ್ಣೆ ಖರೀದಿಗೆ ಎಲ್ಲಿಂದ ಹಣ ಸಂಗ್ರಹ ಮಾಡುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 