ರಾಜ್ಯದ ಎಲ್ಲ ಗೋಶಾಲೆಗಳಲ್ಲಿ ದೀಪೋತ್ಸವ ಆಚರಣೆಗೆ ಆದೇಶ
ಲಕ್ನೋ, ಅ, 27: ಸರಯೂ ನದಿ ತೀರದಲ್ಲಿ 4.10 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಗಿನ್ನಿಸ್ ದಾಖಲೆ ಸ್ಥಾಪಿಸಲು ಸಿದ್ಧತೆ ನಡೆದಿರುವ ನಡುವೆಯೇ ರಾಜ್ಯದ ಎಲ್ಲ ಗೋಶಾಲೆಗಳಲ್ಲಿ ಇಂಥದ್ದೇ ದೀಪೋತ್ಸವ ಹಮ್ಮಿಕೊಳ್ಳುವಂತೆ ಉತ್ತರ ಪ್ರದೇಶದ ಗೋಸೇವಾ ಆಯೋಗ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಆಯೋಗದ ಆದೇಶದ ಹಿನ್ನೆಲೆಯಲ್ಲಿ ಗೋಶಾಲೆಗಳಲ್ಲಿ ನಡೆಸುವ ದೀಪೋತ್ಸವದ ಬಗ್ಗೆ ವೀಡಿಯೊ ದಾಖಲೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. "ಗೋವುಗಳನ್ನು ದೀಪಾವಳಿ ಬಳಿಕ ಪೂಜಿಸಲಾಗುತ್ತದೆ. ಆದ್ದರಿಂದ ಗೋಶಾಲೆಗಳಲ್ಲಿ ದೀಪೋತ್ಸವ ಆಚರಿಸಬೇಕು ಎಂದು ಗೋಸೇವಾ ಆಯೋಗದ ಅಧ್ಯಕ್ಷ ಶ್ಯಾಮ್ನಂದನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ನೂರಾರು ಗೋಶಾಲೆಗಳು ಇರುವ ಹಿನ್ನೆಲೆಯಲ್ಲಿ ಅಯೋಗದ ಸೂಚನೆಯಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ. ಲಕ್ಷಾಂತರ ಹಣತೆಗಳ ಖರೀದಿಗೆ ಹಾಗೂ ನೂರಾರು ಲೀಟರ್ ಸಾಸಿವೆ ಎಣ್ಣೆಯನ್ನು ಸ್ಥಳೀಯ ಮಾರುಕಟ್ಟೆಯಲ್ಲಿ ಖರೀದಿಸಲು ಇಷ್ಟೊಂದು ಅಲ್ಪಾವಧಿಯಲ್ಲಿ ಸಂಪನ್ಮೂಲ ಎಲ್ಲಿಂದ ಸಂಗ್ರಹ ಮಾಡಬೇಕು ಎನ್ನುವುದು ಅಧಿಕಾರಿಗಳ ಚಿಂತೆ. ಆಯೋಗದ ನಿರ್ದೇಶನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಗೋ ದೀಪಾವಳಿಗೆ ಅಗತ್ಯ ಪರಿಕರಗಳನ್ನು ಒದಗಿಸಿಕೊಡುವ ಅನಿವಾರ್ಯತೆಗೆ ಸಿಲುಕಿ ಕೊಂಡಿದೆ. ಮೇವು ಖರೀದಿಗೇ ಹಣಕಾಸು ಮುಗ್ಗಟ್ಟು ಇರುವಾಗ , ಹಣತೆ ಮತ್ತು ಎಣ್ಣೆ ಖರೀದಿಗೆ ಎಲ್ಲಿಂದ ಹಣ ಸಂಗ್ರಹ ಮಾಡುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 