ಭೂಮಿಯ ಫಲವತ್ತತೆಗೆ ಸಾವಯವ, ಸಮಗ್ರ ಕೃಷಿ ಅಗತ್ಯ
Organic, integrated farming is essential for soil fertility
ಹೂವಿನಹಡಗಲಿ: 28- ಪ್ರಸ್ತುತ ಅತಿ ಹೆಚ್ಚು ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಕೆಯಿಂದ ಭೂಮಿಯ ಫಲವತ್ತತೆ ಕಳೆದು (ಬಂಜರು) ಬರಡು ಮಾಡುತ್ತಿದೆ ,ಸಾಹಿತಿ ಜಿ.ಎಸ್.ಸತೀಶ ಆತಂಕ ವ್ಯಕ್ತಪಡಿಸಿದರು.ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಹಿರೇಹಡಗಲಿ ಹೋಬಳಿ ಘಟಕ ತಾಲೂಕಿನ ಮೈಲಾರ ಗ್ರಾಮದ ತೋಟಿಗರ ದೇವೇಂದ್ರ್ಪ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೂದನೂರು ಚಂದ್ರೇಗೌಡ ಸ್ಮಾರಕ ದತ್ತಿ, ಪೂಜಾರ್ ಬಸವರಾಜಪ್ಪ ದೇವೇಂದ್ರ್ಪ ದತ್ತಿ, ಗಡ್ಡಿ ಸಾವಿತ್ರಮ್ಮ ಗಡ್ಡಿ ಬಸಪ್ಪ ಸ್ಮರಣಾರ್ಥ ದತ್ತಿ ಹಾಗೂ ಭ್ರಮರಿಬಾಯಿ ಪಾರಸ್ ಮಲ್ ಮೆಹತಾ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ’ಕೃಷಿ ವಿಜ್ಞಾನಿ’, ’ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು’ ವಿಷಯ ಕುರಿತು ಮಾತನಾಡಿದರು. ಒಂದೇ ಬೆಳೆಯನ್ನು ಬೆಳೆಯದೆ ಸಮಗ್ರ ಕೃಷಿಯನ್ನು ಅಳವಡಿಸಿಕೊಂಡರೆ ಕೃಷಿ ಲಾಭದಾಯಕವಾಗುವುದು ಎಂದರು.
ಆಹಾರ ಬೆಳೆ,ವಾಣಿಜ್ಯ ಬೆಳೆ,ತೋಟಗಾರಿಕೆ ಬೆಳೆಗಳ ಜೊತೆಗೆ ಅರಣ್ಯ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು.ಜತೆಗೆ ಹೈನುಗಾರಿಕೆ ಮೀನುಗಾರಿಕೆ ಕೋಳಿ,ಕುರಿ ಸಾಕಣೆ ಯಿಂದ ಹೆಚ್ಚು ಲಾಭಗಳಿಸಬಹುದು. ಪ್ರಾರಂಭದಲ್ಲಿ ದತ್ತಿದಾನಿ ಟಿ.ಕೆ. ಬ್ಯಾಡಗಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಕಾಶ ದೇವರಗುಡ್ಡ ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರವಂತರಾಗಿ, ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಲು ಕರೆ ನೀಡಿದರು. ರಿಯಾನಾಬಾನು ಸಂಗಡಿಗರು ಪ್ರಾರ್ಥಿಸಿದರು. ಆರ್.ಆನಂದಮೂರ್ತಿ ಸ್ವಾಗತಿಸಿದರು. ಗಾಜಿ ಹೊನ್ನಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನುಷಾ ಸಂಗಡಿಗರು ಕನ್ನಡ ಗೀತೆಗಳ ಗಾಯನ ಮಾಡಿದರು. ಕೆ.ಕಲಾವತಿ, ಎಂ.ಅನುಷಾ,ಪಿ.ಎಂ. ದಾದಾಪೀರ್ ಕವನ ವಾಚಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಟಿ.ವೀರೇಂದ್ರ ಪಾಟೀಲ್ ವಹಿಸಿದ್ದರು. ಕೆ.ಎನ್.ವಂದಿಸಿದರು. ಶಿಕ್ಷಕಿರಾದ ಸುಧಾ ಕೆ.ವಿ. ಹಾಗೂ ದಾಕ್ಷಾಯಣಿ ಮುಳಗುಂದ ಕಾರ್ಯಕ್ರಮ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 