ಸಮಾಜದ ಅಭಿವೃದ್ಧಿಗೆ ಸಂಘಟನೆ ಅಗತ್ಯ: ಕಾಂಚನ ಕುಮಾರ್
Organization is necessary for the development of society: Kanchana Kumar
ಹೂವಿನ ಹಡಗಲಿ 26: ಬಣಜಿಗ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಸಂಘಟನಾ ಕಾರ್ಯದರ್ಶಿ ಕಾಂಚನ ಕುಮಾರ್ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಎಂ ಬಿ ಆಯಿಲ್ ಮಿಲ್ ನಲ್ಲಿ ಮಂಗಳವಾರ ತಾಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಮಾಜಿಕವಾಗಿ ಸದೃಢವಾಗಿ ಬೆಳೆಯಲು ಸಂಘಟನೆ ಅಗತ್ಯ ಜತೆಗೆ ರಾಜಕೀಯ ಸ್ಥಾನ ಮಾನ ಸಿಗಬೇಕು ಎಂದರು. ಬಣಜಿಗ ಸಮಾಜದ ತಾಲೂಕು ಅಧ್ಯಕ್ಷ ಮುಂಡವಾಡ ಉಮೇಶ ಅಧ್ಯಕ್ಷತೆ ವಹಿಸಿಸಮಾಜದ ಏಳಿಗೆಗೆ ಸದಾ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿರಿ ಎಂದರು.
ಗೌರವಾಧ್ಯಕ್ಷ ರುದ್ರ್ಪ ಕರಿಶೆಟ್ಟಿ ರಾಜ್ಯ ಬಣಜಿಗ ವಿಶ್ವಸ್ಥ ಮಂಡಳಿ ಸದಸ್ಯ ಮುರುಗೇಶ ತುರಕಾಣಿ, ಹಿರೇಹಡಗಲಿ ಘಟಕದ ಅಧ್ಯಕ್ಷ ಶಿವಯೋಗೆಪ್ಪ ಹಲಗೇರಿ ಗಿರಿಮಲ್ಲಿಗೆ ಮಹಿಳಾ ಸಹಕಾರಿಯ ಅಧ್ಯಕ್ಷ ಸವಿತಾ ಅಂಗಡಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಯಲಗಚ್ಚಿನಯುವ ಘಟಕದ ಅಧ್ಯಕ್ಷ ಐ ಎಸ್ ವಿಜಯಕುಮಾರ್ ಇದ್ದರು. ಕುಂಬಾರಿ ಸವಿತಾ, ನಾಗರತ್ನ ಕುಂಚೂರು, ಎ ಭುವನೇಶ್ವರಿ ಶೈಲಜಾ ಪವಾಡಶೆಟ್ರು ನಿರ್ವಹಿಸಿದರು. ತಾಲೂಕಿನ ವಿವಿಧ ಗ್ರಾಮಗಳ ಸಮಾಜದ ಬಾಂಧವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 