ನಮ್ಮ ಸಂವಿಧಾನವು ಪ್ರಪಂಚದಲ್ಲಿಯೇ ಸರ್ವಶ್ರೇಷ್ಠವಾದುದು
Our Constitution is the best in the world.
ಲೋಕದರ್ಶನ ವರದಿ
ಗೋಕಾಕ 16 : ಭಾರತೀಯರಲ್ಲಿ ಸಮಾನತೆಯನ್ನು ಕಂಡುಕೊಳ್ಳಲು ಅಂಬೇಡ್ಕರ್ ಅವರು ಸತತ ಪರಿಶ್ರಮಸಿ ಸಂವಿಧಾನ ನೀಡಿದ್ದಾರೆ.ಅದು ಪ್ರಪಂಚದಲ್ಲಯೇ ಸರ್ವಶ್ರೇಷ್ಠವಾದುದು. ಎಂದು ಗೋಕಾಕದ ಸಾಹಿತಿ ಹಾಗೂ ಸಿದ್ದಾರ್ಥ ಲಲಿತ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಜಯಾನಂದ ಮಾದರ ಹೇಳಿದರು. ಅವರು ಸಮೀಪದ ಸಿಂಧಿಕುರಬೇಟ ಅಂಬೇಡ್ಕರ್ ನಗರದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ ಆರ್ ಅಂಬೇಡ್ಕರ್ ಅವರ 135ನೆಯ ಜಯಂತಿ ಉತ್ಸವದ ಸಂದರ್ಭದಲ್ಲಿ ಉಪನ್ಯಾಸ ನೀಡುತ್ತಾ ಮೇಲು ಕೀಳೀನ ವರ್ಣಭೇದಗಳನ್ನು ಹೋಗಲಾಡಿಸುವುದೇ ಅಂಬೇಡ್ಕರ್ ಅವರ ಧ್ಯೇಯವಾಗಿತ್ತು ಸತತ ಅಧ್ಯಯನ ಶೀಲತೆಯಿಂದ ಸಂವಿಧಾನವನ್ನು ರಚಿಸಿ ನಮ್ಮೆಲ್ಲರಿಗೆ ಉಡುಗೊರೆಯಾಗಿ ನೀಡಿದಂಥ ಅಮೂಲ್ಯವಾದ ಸಂವಿಧಾನವು ಸರ್ವರ ಏಳಿಗೆಯನ್ನೇ ಬಯಸುತ್ತದೆ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಭಾರತದ ಭವಿಷ್ಯ ಅಡಗಿದೆ ಸಾಮಾಜಿಕ ಹಾಗೂ ಶೈಕ್ಷಣಿಕ ಪರಿವರ್ತನೆಯಿಂದ ಭಾರತದ ಅಭ್ಯುದಯ ಹೊಂದಲು ಸಾಧ್ಯವೆಂದು ಹೇಳಿದರು. ಮಹಾಲಿಂಗಪ್ಪ ಕೆಳಗೇರಿ, ಪರಸಪ್ಪ ಪೂಜಾರಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಗಣ್ಯಮಾನ್ಯರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 