ರೈತರನ್ನು ಪ್ರೋತ್ಸಾಹಿಸುವುದು ಮತ್ತು ಅವರನ್ನು ಗೌರವಿಸುವುದು ನಮ್ಮ ಕರ್ತವ್ಯ: ಸೋಮನಕಟ್ಟಿ
Our duty is to encourage farmers and respect them: Somanakatti
ರೈತರನ್ನು ಪ್ರೋತ್ಸಾಹಿಸುವುದು ಮತ್ತು ಅವರನ್ನು ಗೌರವಿಸುವುದು ನಮ್ಮ ಕರ್ತವ್ಯ: ಸೋಮನಕಟ್ಟಿ
ಬ್ಯಾಡಗಿ 23: ನಮ್ಮ ರೈತರನ್ನು ಮತ್ತು ಅವರ ಕಠಿಣ ಪರಿಶ್ರಮಕ್ಕೆ ಉತ್ತೇಜಿಸುವುದು ಪ್ರೋತ್ಸಾಹಿಸುವುದು,ಸಹಾಯ ಮಾಡುವುದು ಮತ್ತು ಅವರನ್ನು ಗೌರವಿಸುವುದು ನಮ್ಮ ಕರ್ತವ್ಯವಾಗಬೇಕಿದೆ ಎಂದು ತಹಶೀಲ್ದಾರ ಫಿರೋಜಾಷಾ ಸೋಮನಕಟ್ಟಿ ಹೇಳಿದರು.
ಸೋಮವಾರ ತಾ.ಪಂ.ಸಭಾಭವನದಲ್ಲಿ ರೈತ ದಿನಾಚರಣೆ ಕಾಯ್ರಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶದ ಐದನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿ ವರ್ಷ ರಾಷ್ಟ್ರೀಯ ರೈತ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ತಾ.ಪಂ.ಕಾರ್ಯನಿರ್ವಾಕ ಅಧಿಕಾರಿ ಕೆ.ಎಂ ಮಲ್ಲಿಕಾರ್ಜುನ ಮಾತನಾಡಿಚರಣ್ ಸಿಂಗ್ ಅವರು ತಮ್ಮ ಅವಧಿಯಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದರು. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಹೀಗಾಗಿ ಅವರ ಜನ್ಮದಿನವನ್ನು ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೈತರು ದೇಶದ ಬೆನ್ನೆಲುಬು. ದೇಶದ ಜನಸಂಖ್ಯೆಯಲ್ಲಿ ರೈತರು ಶೇ 68ರಷ್ಟಿದ್ದಾರೆ. ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವೆಂದರು. ತಾಲೂಕಾ ರೈತ ಸಂಘದ ಗಂಗಣ್ಣ ಯಲಿ, ರೈತ ಧುರೀಣ ಶಂಕ್ರಗೌಡ ಪಾಟೀಲ ರೈತರ ಆಗು ಹೋಗುಗಳ ಬಗ್ಗೆ ವಿವರಿಸಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಅಶೋಕ ಕುರುಬರ ಸೇರಿದಂತೆ ಇತರರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 