ನಮ್ಮ ಶಿಕ್ಷಣ ಸಂಸ್ಥೆಗಳು ಬಡ ವಿದ್ಯಾರ್ಥಿಗಳಿಗೆ ವರದಾನವಾಗಿವೆ: ಡಾ. ಅಶೋಕ ಪಾಟೀಲ
Our educational institutions are a boon for poor students: Dr. Ashok Patil
ಸನ್ಮತಿ ಶಿಕ್ಷಣ ಸಹಕಾರ ಸಮಿತಿಯ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಪನ್ನ;
ಕಾಗವಾಡ 21: ಸನ್ಮತಿ ಶಿಕ್ಷಣ ಸಹಕಾರ ಸಮಿತಿಯಿಂದ ನಡೆಸಲಾಗುತ್ತಿರುವ ಶಾಲಾ ಕಾಲೇಜುಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವರದಾನವಾಗಿದ್ದು, ಫಲಿತಾಂಶವೂ ಸಹ ಉತ್ತಮವಾಗಿದೆಯೆಂದು ನಿರ್ದೇಶಕ ಡಾ. ಅಶೋಕ ಪಾಟೀಲ ತಿಳಿಸಿದ್ದಾರೆ.
ಅವರು, ಶನಿವಾರ ದಿ. 20 ರಂದು ತಾಲೂಕಿನ ಶೇಡಬಾಳ ಪಟ್ಟಣದ ಸನ್ಮತಿ ಶಿಕ್ಷಣ ಸಹಕಾರ ಸಮಿತಿ ನಿಯಮಿತ ಇದರ 73 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡುತ್ತಿದ್ದರು. ನಮ್ಮ ಸಹಕಾರ ಸಮಿತಿಯ ವತಿಯಿಂದ ತಾಲೂಕಿನ ಶೇಡಬಾಳ, ಉಗಾರ ಬಿಕೆ ಮತ್ತು ಬೆಳಗಾವಿಯಲ್ಲಿ ಒಟ್ಟು 11 ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಸಂಸ್ಥೆಗಳ ಫಲಿತಾಂಶ ಉತ್ತಮವಾಗಿದೆ. ಆಯಾ ಶಾಲಾ-ಕಾಲೇಜುಗಳು ಗವರ್ನಿಂಗ್ ಬಾಡಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರ ಸಹಕಾರದೊಂದಿಗೆ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಬೆಳಗಾವಿ ಸಮಿತಿ ಕಾಲೇಜಿನ ಉಪನ್ಯಾಸಕ ಭರತ ಅಲಸಂದಿ, ಶೇಡಬಾಳ ಸನ್ಮತಿ ಪ್ರೌಢಶಾಲೆಯ ಮುಖ್ಯೋದ್ಯಾಪಕಿ ಎಂ.ಎನ್. ಕಾಳೇನಟ್ಟಿ, ಶೇಡಬಾಳ ಸಮಿತಿ ಕಾಲೇಜಿನ ಪ್ರಾಂಶುಪಾಲ ಬಾಹುಬಲಿ ಬಣಜವಾಡ, ಉಗಾರ ಬಿಕೆಯ ಪದ್ಮಾವತಿ ಶಾಲೆಯ ಮುಖ್ಯೋದ್ಯಾಪಕ ಎಸ್.ಪಿ. ಕಾಂಬಳೆ ಆಯಾ ಶಾಲೆಗಳ ವರದಿ ವಾಚನ ಮಾಡಿದರು.
ಸಭೆಯ ಅಧ್ಯಕ್ಷತೆಯನ್ನು ಸನ್ಮತಿ ಶಿಕ್ಷಣ ಸಹಕಾರ ಸಮಿತಿಯ ಅಧ್ಯಕ್ಷ ವಿನೋದ ಬರಗಾಲೆ ವಹಿಸಿದ್ದರು. ಈ ವೇಳೆ ಉಪಾಧ್ಯಕ್ಷ ಅಶೋಕ ನಾಂದ್ರೆ, ಅಶ್ವತಕುಮಾರ ಪಾಟೀಲ, ಡಾ. ಅಶೋಕ ಪಾಟೀಲ, ಸನ್ಮತಿ ಪಾಟೀಲ, ಅಕ್ಕಾತಾಯಿ ಮುಜಾವರ, ಸುನೀತಾ ಮಾಕನ್ನವರ, ಗವರ್ನಿಂಗ್ ಬಾಡಿ ಚೇರಮನ್ನ ವಿನೋದ ಪಾಟೀಲ, ಶಾಂಥಿನಾಥ ಪಾಟೀಲ, ಎ.ಬಿ. ಪಾಟೀಲ, ರವಿ ದಂಡಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕುಮಾರ ಮಾಲಗಾಂವೆ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 