ನಿಮ್ಮ ಸುರಕ್ಷತೆಗಾಗಿ ನಮ್ಮ ತಂದೆ-ತಾಯಿ ಕರ್ತವ್ಯದಲ್ಲಿದ್ದಾರೆ: ಪೊಲೀಸರ ಮಕ್ಕಳ ಮನವಿ
ಬೆಂಗಳೂರು,
ಮಾ.29, ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಈಗಾಗಲೇ ದೇಶವನ್ನೇ
ಲಾಕ್ಡೌನ್ ಮಾಡಲಾಗಿದ್ದು, ಮನೆಯಿಂದ ಯಾರೊಬ್ಬರೂ ಹೊರ ಬರದಂತೆ ಪೊಲೀಸರು ಮನವಿ
ಮಾಡುತ್ತಿದ್ದಾರೆ.ಆದರೆ, ಕೆಲವರು ಲಾಕ್ ಡೌನ್ ಆದೇಶಕ್ಕಾಗಲೀ, ಪೊಲೀಸರ ಮಾತಿಗೂ ಕಿವಿಗೊಡದೆ ಅನಾವಶ್ಯಕವಾಗಿ ರಸ್ತೆಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ತಮ್ಮ
ಆರೋಗ್ಯವನ್ನು ಬದಿಗಿಟ್ಟು ಕಾರ್ಯನಿರ್ವಹಿಸಲೇ ಬೇಕು. ಆದ್ದರಿಂದ ಜನತೆ ಇದನ್ನು
ಅರಿತುಕೊಂಡು ಲಾಕ್ಡೌನ್ಗೆ ಸಹಕರಿಸಬೇಕು ಎಂದು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.ಪೊಲೀಸರು
ಮನೆಯಿಂದ ಹೊರಗೆ ಬಂದು ಕಾರ್ಯನಿರ್ವಹಿಸಬೇಕಾಗಿರುವುದರಿಂದ ಮನೆಗೆ ಹೋದ ನಂತರ
ಕುಟುಂಬಸ್ಥರಿಂದ ದೂರವೇ ಉಳಿಯುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಸಂಚಾರ ವಿಭಾಗದ ಜಂಟಿ
ಪೊಲೀಸ್ ಆಯುಕ್ತ ರವಿಕಾಂತೇಗೌಡ ಬಹಿರಂಗಪಡಿಸಿದ್ದಾರೆ.ದಯವಿಟ್ಟು ಮನೆಯಿಂದ ಹೊರಬರದೆ ನಮಗೆ ಸಹಕರಿಸಿ ಎಂದು ವಿನಂತಿಸಿಕೊಂಡಿದ್ದಾರೆ.ನಿಮ್ಮ
ಸುರಕ್ಷತೆಗಾಗಿ ನಮ್ಮ ತಂದೆ ತಾಯಿ ಹೊರಗೆ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮನೆಗೆ ಬಂದಾಗಲೂ ನಾನು ಅವರ ಸಮೀಪ ನಮಗೆ ತೆರಳಲು ಆಗುತ್ತಿಲ್ಲ. ದಯವಿಟ್ಟು ಮನೆಯಲ್ಲೇ
ಇದ್ದು ಸಹಕರಿಸಿ ಎಂದು ಪೊಲೀಸರ ಮಕ್ಕಳು ಸಾರ್ವಜನಿಕರಲ್ಲಿ ಮನವಿ ಮಾಡುವ
ಸಂದೇಶವೊಂದನ್ನು ಅವರು ಹಂಚಿಕೊಂಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 