ಭಾರತಕ್ಕಾಗಿ ಕೃತಕ ಬುದ್ಧಿಮತ್ತೆ ಸಿದ್ಧಪಡಿಸುವುದು ನಮ್ಮ ಗುರಿ: ಪ್ರಧಾನಿ ಮೋದಿ
Our goal is to develop artificial intelligence for India: PM Modi
ನವದೆಹಲಿ 29: ‘ದೇಶದ ಭವಿಷ್ಯದ ಯುವಜನತೆಯನ್ನು ಸಿದ್ಧಪಡಿಸಲು ಶಿಕ್ಷಣ ವ್ಯವಸ್ಥೆ ಪರಿಣಾಮಕಾರಿ ಮಾರ್ಗವಾಗಿದೆ. ಅದನ್ನು ಆಧುನೀಕರಣಗೊಳಿಸುವತ್ತ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.
YUGM ಸಮ್ಮೇಳನ
ಉದ್ದೇಶಿಸಿ ಮಾತನಾಡಿದ ಅವರು, ‘ಕೃತಕ ಬುದ್ಧಿಮತ್ತೆಯನ್ನು ಭಾರತಕ್ಕಾಗಿ ಸಿದ್ಧಪಡಿಸುವುದು ನಮ್ಮ ಗುರಿ’ ಎಂದಿದ್ದಾರೆ.
‘ಭವಿಷ್ಯದ
ತಂತ್ರಜ್ಞಾನ ಕ್ಷೇತ್ರದಲ್ಲಿ ಇಡೀ ಜಗತ್ತಿನಲ್ಲೇ ಭಾರತ ಮುಂಚೂಣಿಯಲ್ಲಿರುವಂತೆ ಕಲಸ ಮಾಡಬೇಕು. 21ನೇ ಶತಮಾನದ ಅಗತ್ಯಗಳನ್ನು
ಪೂರೈಸಲು ದೇಶದ ಶಿಕ್ಷಣ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
‘2013–14ರಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ₹60 ಸಾವಿರ ಕೋಟಿ ನೀಡಲಾಗುತ್ತಿತ್ತು. ಅದು ಈಗ 1.25 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ. ಕಡಿಮೆ ಸಮಯದಲ್ಲಿ ಹೊಸ ಉತ್ಪನ್ನಗಳ ಆಲೋಚನೆ, ಮಾದರಿ ವಿನ್ಯಾಸ ಮತ್ತು ಉತ್ಪನ್ನಗಳ ಅಭಿವೃದ್ಧಿಯಾಗುವ ಕಡೆ ಹೆಜ್ಜೆ ಹಾಕಬೇಕಿದೆ. ಪ್ರತಿಭೆ, ಉತ್ಸಾಹ ಮತ್ತು ತಂತ್ರಜ್ಞಾನದಿಂದ ಭಾರತದ ಭವಿಷ್ಯ ಪರಿವರ್ತನೆಯ ಹಾದಿಯ ಕಡೆ ಹೊರಳಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
‘ಭಾರತದ
ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಯುವಶಕ್ತಿಯ ಹೊಸ ಆವಿಷ್ಕಾರಗಳ ತಾಣಗಳಾಗಿ ಅಭಿವೃದ್ಧಿ ಹೊಂದುತ್ತಿವೆ’ ಎಂದು ಆಶಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 